ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದ ವೃದ್ಧನ ಮನೆ ಬಾಗಿಲಿಗೇ ತೆರಳಿ ದೂರು ಸ್ವೀಕರಿಸಿದ ನ್ಯಾಯಾಧೀಶರು! ತುಮಕೂರಲ್ಲಿ ಅಪರೂಪದ ಪ್ರಕರಣ

ಹುಳಿಯಾರು(ತುಮಕೂರು): ಸೊಂಟ ಮುರಿದುಕೊಂಡು ವೃದ್ಧರೊಬ್ಬರು ಅಸಹಾಯಕ ಸ್ಥಿತಿಯಲ್ಲಿ ಮನೆಯಲ್ಲೇ ಇದ್ದಾರೆ. ಇವರ ಮಕ್ಕಳಿಬ್ಬರೂ ಅಂಗವಿಕಲರು. ಸರ್ಕಾರದಿಂದ ಮಂಜೂರಾಗಿದ್ದ ಜಮೀನು ವಿಚಾರವಾಗಿ ಅನ್ಯಾಯವಾಗಿದೆ ನ್ಯಾಯ ಕೊಡಿಸಿ ಎಂದು ಪೊಲೀಸರಿಗೆ ದೂರು ನೀಡಿದರೂ ಪ್ರಯೋಜನವಾಗಿರಲಿಲ್ಲ. ಕೊನೆಗೆ ನ್ಯಾಯಾಧೀಶರಿಗೇ ದೂರು ಕೊಡಲು ಯೋಚಿಸಿದ್ದರು. ಇವರ ಅಸಹಾಯಕ ಪರಿಸ್ಥಿತಿಯನ್ನು ಅರಿತ ನ್ಯಾಯಾಧೀಶರೇ ಖುದ್ದು ಇವರ ಮನೆ ಬಾಗಿಲಿಗೇ ತೆರಳಿ ದೂರು ಸ್ವೀಕರಿಸಿದ್ದಾರೆ. ಇಂತಹ ಅಪರೂಪದ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ಕೆಂಕೆರೆ ಗ್ರಾಮದಲ್ಲಿ ನಡೆದಿದೆ. 80 ವರ್ಷದ ಪುಟ್ಟಯ್ಯ ಅವರಿಗೆ 1966ರಲ್ಲಿ … Continue reading ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದ ವೃದ್ಧನ ಮನೆ ಬಾಗಿಲಿಗೇ ತೆರಳಿ ದೂರು ಸ್ವೀಕರಿಸಿದ ನ್ಯಾಯಾಧೀಶರು! ತುಮಕೂರಲ್ಲಿ ಅಪರೂಪದ ಪ್ರಕರಣ