ರಾಷ್ಟ್ರೀಯ ಹೆದ್ದಾರಿ ಬದಿ ಕಾಡಾನೆ ಪ್ರತ್ಯಕ್ಷ

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ಮಂಗಳವಾರ ಮುಂಜಾನೆ ರಸ್ತೆ ಬದಿ ಕಾಡಾನೆ ಕಂಡುಬಂದಿದೆ. ಮುಂಡಾಜೆಯಿಂದ ಕಕ್ಕಿಂಜೆ ಕಡೆ ತೆರಳುತ್ತಿದ್ದ ಬೈಕ್ ಮೆಕಾನಿಕ್ ಒಬ್ಬರು ಬೆಳಗ್ಗೆ 9 ಗಂಟೆ ಸುಮಾರಿಗೆ ಮುಂಡಾಜೆಯ ಕಾಪು ಬಳಿ ಹೆದ್ದಾರಿ ಬದಿಯ ಪೊದೆಯಲ್ಲಿ ನಿಂತುಕೊಂಡಿದ್ದ ಕಾಡಾನೆಯನ್ನು ಕಂಡಿದ್ದಾರೆ. ತಕ್ಷಣ ಈ ವಿಚಾರವನ್ನು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದು ಚಿಬಿದ್ರೆ ವಿಭಾಗದ ಡಿಆರ್‌ಎಫ್‌ಒ ಭವಾನಿ ಶಂಕರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಕಾಡಾನೆ ರಸ್ತೆಯ ಇನ್ನೊಂದು ಬದಿ … Continue reading ರಾಷ್ಟ್ರೀಯ ಹೆದ್ದಾರಿ ಬದಿ ಕಾಡಾನೆ ಪ್ರತ್ಯಕ್ಷ