More

    ತಾರಕ್​ ರಾಮ್​ಗೆ ಚಿಕಿತ್ಸೆ: ನಾರಾಯಣ ಹೃದಯಾಲಯಕ್ಕೆ ಜ್ಯೂ.ಎನ್​.ಟಿ.ಆರ್​, ಸಚಿವ ಡಾ. ಸುಧಾಕರ್ ಭೇಟಿ

    ಆನೇಕಲ್​: ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ತೆಲುಗು ನಟ ಮತ್ತು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್​.ಟಿ. ರಾಮರಾವ್ ಅವರ ಮೊಮ್ಮಗ ತಾರಕ್​ ರತ್ನ ಅವರ ಆರೋಗ್ಯ ವಿಚಾರಿಸಲು ಟಾಲಿವುಡ್​ ನಟ ಜ್ಯೂನಿಯರ್​ ಎನ್​.ಟಿ.ಆರ್​ ಮತ್ತು ಡಾ.ಕೆ. ಸುಧಾಕರ್​ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

    ಇದನ್ನೂ ಓದಿ: ಮಗಳು ಮಸಾಬ ಮದುವೆಗೆ ಭಾರತಕ್ಕೆ ಬಂದ ಕ್ರಿಕೆಟಿಗ ವಿವಿಯನ್​ ರಿಚರ್ಡ್ಸ್​ …

    ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ಶುಕ್ರವಾರ ನಡೆದ ರಾಜಕೀಯ ಪಾದಯಾತ್ರೆಯಲ್ಲಿ ತಾರಕ್​ ರತ್ನ ಹೃದಯಾಘಾತದಿಂದ ಕುಸಿದುಬಿದ್ದಿದ್ದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ, ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿತ್ತು.

    ತೀವ್ರ ಹೃದಯಾಘಾತ ಹಿನ್ನೆಲೆಯಲ್ಲಿ ಅವರಿಗೆ ತಕ್ಷಣವೇ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ರಕ್ತಸ್ರಾವ ನಿಲ್ಲದಿರುವುದರಿಂದ ಮುಂದಿನ 24 ಗಂಟೆಗಳ ಚಿಕಿತ್ಸೆ ನಿರ್ಣಾಯಕ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಮಾಡಲು ಅವರ ಕುಟುಂಬಸ್ಥರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳು ಬೆಂಗಳೂರಿಗೆ ಬಂದಿದ್ದಾರೆ.

    ಇದನ್ನೂ ಓದಿ: ಚಂದನವನಕ್ಕೆ ಅನುಪಂ ಖೇರ್​; ‘ಘೋಸ್ಟ್​’ ಚಿತ್ರದಲ್ಲಿ ಪ್ರಮುಖ ಪಾತ್ರ

    ಈ ಸಂಬಂಧ ತಾರಕ್​ ರಾಮ್​ ಅವರ ಸಹೋದರ ಸಂಬಂಧಿ ಜ್ಯೂನಿಯರ್ ಎನ್​.ಟಿ.ಆರ್ ಇದೀಗ ಬೆಂಗಳೂರಿಗೆ ಬಂದಿದ್ದಾರೆ. ಸಚಿವ ಕೆ. ಸುಧಾಕರ್ ಜತೆಗೆ ನಾರಯಣ ಹೃದಯಾಲಯಕ್ಕೆ ಭೇಟಿ ಕೊಟ್ಟಿದ್ದಾರೆ. ಜ್ಯೂನಿಯರ್​ ಎನ್​.ಟಿ.ಆರ್​ ಬಂದಿರುವ ವಿಷಯ ತಿಳಿದು ಆಸ್ಪತ್ರೆ ಬಳಿ ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಜಮಾಯಿಸಿದ್ದಾರೆ. ಹೆಬ್ಬಗೋಡಿ ಪೊಲೀಸರಿಂದ ಆಸ್ಪತ್ರೆ ಬಳಿ ಬಿಗಿ ಬಂದೋಬಸ್ತ್​ ಏರ್ಪಡಿಸಲಾಗಿದೆ.

    ತಾರಕ್ ರತ್ನ ಆರೋಗ್ಯ ಸ್ಥಿತಿ ಗಂಭೀರ; ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts