ತುಮಕೂರು: ‘ಜೂನಿಯರ್ ರವಿಚಂದ್ರನ್’ ಎಂದೇ ಹೆಸರಾಗಿದ್ದ ಆರ್ಕೆಸ್ಟ್ರಾ ಕಲಾವಿದ ಲಕ್ಷ್ಮೀನಾರಾಯಣ್ ಎಂಬವರು ವಿದ್ಯುತ್ ಶಾಕ್ನಿಂದಾಗಿ ಸಾವಿಗೀಡಾಗಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಇಂಥದ್ದೊಂದು ಅವಘಡ ಸಂಭವಿಸಿದೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೆರೂರು ಗ್ರಾಮದ ನಿವಾಸಿ ಲಕ್ಷ್ಮೀನಾರಾಯಣ್ (35) ಸಾವಿಗೀಡಾದವರು. ಇವರು ಇಂದು ಸಂಪ್ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.
ಸಂಗೀತ ಸಂಜೆ ಕಾರ್ಯಕ್ರಮದ ಕಲಾವಿದನಾಗಿ ಕೆಲಸ ಮಾಡುತ್ತಿದ್ದ ಲಕ್ಷ್ಮೀನಾರಾಯಣ್, ರವಿಚಂದ್ರನ್ ಅವರನ್ನು ಹೋಲುತ್ತಿದ್ದುದರಿಂದ ಮತ್ತು ಅವರಂತೆಯೇ ವೇಷಭೂಷಣ ಹೊಂದಿದ್ದರಿಂದ ಅವರು ‘ಜೂನಿಯರ್ ರವಿಚಂದ್ರನ್’ ಎಂದೇ ಕರೆಯಲ್ಪಡುತ್ತಿದ್ದರು. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸುಪ್ರಭಾತ ಅಭಿಯಾನ ಹಿಂಪಡೆದ ಶ್ರೀರಾಮಸೇನೆ; ಅದಕ್ಕೆ ಕಾರಣವಿದು…