ಭೋಪಾಲ್: ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಮಾಜಿ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಇಂದು ಮಧ್ಯಪ್ರದೇಶದ ರಾಜ್ಯ ಸಭಾ ಚುನಾವಣೆಗೆ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ರಾಜ್ಯ ಬಿಜೆಪಿ ಕಚೇರಿಯಿಂದ ರಾಜ್ಯ ವಿಧಾನಸಭಾ ಕಾರ್ಯದರ್ಶಿಯ ಕಚೇರಿಯನ್ನು ತಲುಪಿದ ಸಿಂಧಿಯಾ ಅಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ಆ ವೇಳೆ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯ ಬಿಜೆಪಿ ಅಧ್ಯಕ್ಷ ವಿ.ಡಿ.ಶರ್ಮಾ, ರಾಜ್ಯಸಭಾ ಸದಸ್ಯ ಪ್ರಭಾತ್ ಸೇರಿ ಪಕ್ಷದ ಅನೇಕ ಮುಖಂಡರು ಸಿಂಧಿಯಾ ಜತೆಯಿದ್ದು ಶುಭಹಾರೈಸಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಮೊದಲು ಸಿಂಧಿಯಾ ಸೇರಿದಂತೆ ಬಿಜೆಪಿಯ ಅನೇಕ ಮುಖಂಡರು ಮಾಜಿ ಸಚಿವರಾದ ನರೋತ್ತಮ್ ಮಿಶ್ರಾ ಅವರ ಮನೆಯಲ್ಲಿ ಔತಣ ಕೂಟದಲ್ಲಿ ಭಾಗವಹಿಸಿದ್ದರು.
ಮಾ.10ರಂದು ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ಗೆ ರಾಜೀನಾಮೆ ಪತ್ರವನ್ನು ನೀಡಿದ್ದರು. ಮಾ.11ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಪಕ್ಷಕ್ಕೆ ಸೇರಿದ ಕೆಲವೇ ಗಂಟೆಗಳಲ್ಲಿ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿತ್ತು. (ಏಜೆನ್ಸೀಸ್)
ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರಿದ ಕೂಡಲೇ ಟ್ವೀಟ್ ಮಾಡಿದ ರಾಜಸ್ಥಾನ ಡಿಸಿಎಂ ಸಚಿನ್ ಪೈಲಟ್…
ವದಂತಿಗಳಿಂದ ಬೇಸರಗೊಂಡ ಅನುಷ್ಕಾ ಶೆಟ್ಟಿ ತನ್ನ ಮದುವೆ ಕುರಿತು ಹೇಳಿದ್ದು ಹೀಗೆ…