ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ತವರು ರಾಜ್ಯದ ಜನರಿಗೆ ಶುಭ ಸುದ್ದಿ ನೀಡಿದ ಜ್ಯೋತಿರಾದಿತ್ಯ ಸಿಂಧ್ಯಾ

ನವದೆಹಲಿ: ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ತಮ್ಮ ತವರು ರಾಜ್ಯವಾದ ಮಧ್ಯಪ್ರದೇಶದ ಜನರಿಗೆ ಇಂದು ಶುಭ ಸುದ್ದಿಯೊಂದನ್ನು ನೀಡಿದ್ದಾರೆ. ಉಡಾನ್ ಯೋಜನೆಯಲ್ಲಿ ರಾಜ್ಯಕ್ಕೆ ಇನ್ನಷ್ಟು ವಿಮಾನಗಳ ಸಂಚಾರ ಆರಂಭಿಸುವುದಾಗಿ ಹೇಳಿದ್ದಾರೆ. ಕೇಂದ್ರ ಸರ್ಕಾರದ ಉಡಾನ್​ ಯೋಜನೆಯಲ್ಲಿ ಮಧ್ಯಪ್ರದೇಶದಲ್ಲಿ ಜುಲೈ 16ರಿಂದ ಹೊಸದಾಗಿ 8 ವಿಮಾನಗಳು ಸಂಚಾರ ಆರಂಭಿಸಲಿವೆ. ಗ್ವಾಲಿಯರ್-ಮುಂಬೈ-ಗ್ವಾಲಿಯರ್, ಗ್ವಾಲಿಯರ್-ಪುಣೆ-ಗ್ವಾಲಿಯರ್, ಜಬಲ್ಪುರ-ಸೂರತ್-ಜಬಲ್ಪುರ, ಅಹಮದಾಬಾದ್-ಗ್ವಾಲಿಯರ್ ಅಹಮದಾಬಾದ್​ ಮಾರ್ಗದಲ್ಲಿ ವಿಮಾನಗಳು ಸಂಚರಿಸಲಿವೆ. ಹೊಸ ವಿಮಾನಗಳನ್ನು ಸ್ಪೈಸ್ ಜೆಟ್ ನಿರ್ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ. … Continue reading ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ತವರು ರಾಜ್ಯದ ಜನರಿಗೆ ಶುಭ ಸುದ್ದಿ ನೀಡಿದ ಜ್ಯೋತಿರಾದಿತ್ಯ ಸಿಂಧ್ಯಾ