More

    ಕಾರ್ಮಿಕರು ಕೆಲಸಕ್ಕೆ ಹಾಜರಾಗಲಿ

    ಬಾಗಲಕೋಟೆ: ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಕಾರ್ಮಿಕರ ಹಿತ ಕಾಪಾಡುವ ದೃಷ್ಟಿಯಿಂದ ಕೆಲಸಕ್ಕೆ ಹಾಜರಾಗುವಂತೆ ಜಿಲ್ಲಾಧಿಕಾರಿ ಕೆ.ರಾಜೇಂದ್ರ ಕಾರ್ಮಿಕರಲ್ಲಿ ಮನವಿ ಮಾಡಿದ್ದಾರೆ.

    ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ಹೂಡಿಕೆದಾರರು ಹಾಗೂ ರೈತರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು, ಈ ಅವಧಿಯಲ್ಲಿ ಕಾರ್ಮಿಕರಿಗೆ ಕಾರ್ಮಿಕರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತವು ಈಗಾಗಲೇ ವಿವಿಧ ಕಾರ್ಖಾನೆಗಳಿಗೆ ತಾತ್ಕಾಲಿಕ ಪರಿಹಾರವಾಗಿ ಉದ್ಯೋಗ ನೀಡಲು ತಿಳಿಸಿದ್ದು, ಕಾರ್ಮಿಕರು ಕೆಲಸಕ್ಕೆ ಹಾಜರಾಗುವಂತೆ ಜಿಲ್ಲಾಡಳಿತದಿಂದ ಮತ್ತೊಮ್ಮೆ ಮನವಿ ಮಾಡಿಕೊಂಡಿರುವುದಾಗಿ ತಿಳಿಸಿದರು.

    ಇನ್ನು ಕಾರ್ಮಿಕರು ತಮ್ಮ ಸಮಸ್ಯೆ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ಅವಕಾಶ ಕಲ್ಪಸುವಂತೆ ಜಿಲ್ಲಾಡಳಿತಕ್ಕೆ ಕೋರಿದರು. ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಡಳಿತದಿಂದ ಭರವಸೆ ನೀಡಲಾಯಿತು.

    ಅಲ್ಲದೆ, ಕಾರ್ಮಿಕರು ತಮ್ಮ ಉಳಿದ ಬಾಕಿ ವೇತನ ಪಾವತಿ ಕುರಿತಂತೆ ಕ್ರಮಕೈಗೊಳ್ಳಲು ಮನವಿ ಮಾಡಿದ ಕಾರಣ ಜಿಲ್ಲಾಧಿಕಾರಿ ಕೆ.ರಾಜೇಂದ್ರ ಇದಕ್ಕೆ ಸಂಬಂಧಿಸಿದಂತೆ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಸೇರಿದಂತೆ ರನ್ನ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರು, ಕಾರ್ಮಿಕ ಮುಖಂಡರು, ರೈತ ಮುಖಂಡರಾದ ಬಸವಂತಪ್ಪ ಕಾಂಬಳೆ, ಮುತ್ತಪ್ಪ ಕೋಮಾರ, ಈರಪ್ಪ ಹಂಚಿನಾಳ ಇತರರಿದ್ದರು.

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts