More

    ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಅಂಗಳ ಸಜ್ಜು

    ಹುಬ್ಬಳ್ಳಿ : ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿಯ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ ದೃಷ್ಟಿಯಿಂದ ನವಲಗುಂದ ವಿಧಾನಸಭಾ ಮತ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಿರುವ ಧಾರವಾಡ ಸಂಸದ ಟ್ರೋಫಿ ಕಬ್ಬಡ್ಡಿ ಪಂದ್ಯಾವಳಿಗಳನ್ನು ಧಾರವಾಡ ಜಿಲ್ಲಾ ಅಮೇಚೂರ್ ಕಬ್ಬಡ್ಡಿ ಅಸೋಸಿಯೇಷನ್ ಸಹಯೋಗದ ಕಬಡ್ಡಿ ಪಂದ್ಯಾವಳಿಯ ಅಂಗಳ ನವಲಗುಂದ ಪಟ್ಟಣದ ಶಂಕರ ಮಹಾವಿದ್ಯಾಲಯದ ಆವರಣದಲ್ಲಿ ಸಜ್ಜುಗೊಂಡಿದೆ.

    ಫೆ. 19 ಹಾಗೂ 20ರಂದು ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಏರ್ಪಡಿಸಲಾಗಿದ್ದು, ದೇಶಿ ಕ್ರೀಡೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ 8 ವಿಧಾನಸಭಾ ಕ್ಷೇತ್ರದಲ್ಲಿ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ.

    19ರಂದು ಸಂಜೆ 6 ಗಂಟೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸುವರು. ಶಾಸಕರಾದ ಎಂ.ಆರ್. ಪಾಟೀಲ, ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿರುವರು. ಈಗಾಗಲೇ 95 ಕ್ಕೂ ಹೆಚ್ಚು ತಂಡಗಳು ನೋಂದಣಿ ಮಾಡಿಕೊಂಡಿವೆ.

    ಪ್ರಥಮ ಬಹುಮಾನ 40 ಸಾವಿರ ರೂ. ದ್ವಿತೀಯ 20 ಸಾವಿರ ರೂ., ತೃತೀಯ ಹಾಗೂ ನಾಲ್ಕನೇ ತಂಡಕ್ಕೆ ತಲಾ 10 ಸಾವಿರ ರೂ. ಬಹುಮಾನ ನೀಡಲಾಗುವುದು. ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಥಮ ಸ್ಥಾನ ಪಡೆದ ತಂಡವನ್ನು ಆಯ್ಕೆ ಮಾಡಿ, ನಂತರ ಜಿಲ್ಲಾ ಮಟ್ಟದ ಪಂದ್ಯದಲ್ಲಿ ಗೆದ್ದ ತಂಡಕ್ಕೆ 1 ಲಕ್ಷ ರೂ. ಬಹುಮಾನ, ಎರಡನೇ ತಂಡಕ್ಕೆ ತಂಡಕ್ಕೆ 60 ಸಾವಿರ ರೂ., ಮೂರು ಮತ್ತು ನಾಲ್ಕನೇ ಸ್ಥಾನ ಪಡೆದ ತಂಡಕ್ಕೆ ತಲಾ 30 ಸಾವಿರ ರೂ. ಬಹುಮಾನ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

    ಸಾಂಸ್ಕೃತಿಕ ಕಾರ್ಯಕ್ರಮ :

    ರಾಜ್ಯ ಸರ್ಕಾರದ ಅತ್ಱುತ್ತಮ ಗಾಯಕ ಪ್ರಶಸ್ತಿ ಪುರಸ್ಕೃತ ಕನ್ನಡ ಚಿತ್ರರಂಗದ ಹಿನ್ನಲೆ ಗಾಯಕ ನವೀನ್ ಸಜ್ಜು ಕ್ರೀಡಾಪ್ರೇಮಿಗಳನ್ನು ರಂಜಿಸಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts