ಸಾಸಲು ಗ್ರಾಮದಲ್ಲಿ ಕಡೇ ಕಾರ್ತಿಕ ವಿಶೇಷ ಪೂಜೆ

blank

ಕಿಕ್ಕೇರಿ: ಬಯಲುಸೀಮೆಯ ಕುಕ್ಕೆ ಸುಬ್ರಹ್ಮಣ್ಯ ಎಂದೇ ಪ್ರಸಿದ್ಧಿ ಪಡೆದಿರುವ ಸಾಸಲು ಕ್ಷೇತ್ರದಲ್ಲಿ ಕಾರ್ತಿಕ ಮಾಸದ ಕಡೇ ಸೋಮವಾರ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.

ವಿವಿಧೆಡೆಯಿಂದ ಬೆಳಗಿನ ಜಾವವೇ ಆಗಮಿಸಿದ ಭಕ್ತರು ಪವಿತ್ರ ಸೋಮೇಶ್ವರ ಪುಷ್ಕರಿಣಿಯಲ್ಲಿ ಸ್ನಾನ ಮಾಡಿದರು. ಸರತಿಯಲ್ಲಿ ನಿಂತು ಶ್ರದ್ಧಾಭಕ್ತಿಯಿಂದ ಬಾಲಾಲಯದಲ್ಲಿ ಪ್ರತಿಷ್ಠಾಪಿಸಿರುವ ಸೋಮೇಶ್ವರ, ಶಂಭುಲಿಂಗೇಶ್ವರ ಮೂರ್ತಿ ಹಾಗೂ ಗ್ರಾಮದಲ್ಲಿರುವ ಸಹೋದರಿ ಕುದುರೆಮಂಡಮ್ಮ ದೇವಿ ದರ್ಶನ ಪಡೆದರು,

ಶಂಭುಲಿಂಗೇಶ್ವರ ದೇಗುಲ ತಾಣದಲ್ಲಿರುವ ನಾಗಬನಕ್ಕೆ ಭಕ್ತರು ತೆರಳಿ ಹುತ್ತಕ್ಕೆ ಅರಿಶಿಣ, ಹಾಲು, ಮೊಸರು ಅಭಿಷೇಕ ನೆರವೇರಿಸಿ, ಪುಷ್ಪಗಳಿಂದ ಅಲಂಕರಿಸಿದರು. ರೋಗರುಜಿನ, ಚರ್ಮವ್ಯಾಧಿ ಬಾರದಂತೆ ಪ್ರಾರ್ಥಿಸಿದರು.

ಶಂಭುಲಿಂಗೇಶ್ವರ, ಸೋಮೇಶ್ವರ ಅನ್ನದಾಸೋಹ ಸಮಿತಿ ಸದಸ್ಯರು ದಾನಿಗಳ ಸಹಕಾರದಿಂದ ಅನ್ನದಾಸೋಹ ಏರ್ಪಡಿಸಲಾಗಿತ್ತು.

Share This Article

ಈ ಅಭ್ಯಾಸಗಳಿಂದ ನೀವು ಶ್ವಾಸಕೋಶ ಕ್ಯಾನ್ಸರ್​ಗೆ​ ತುತ್ತಾಗಬಹುದು ಎಚ್ಚರ! ತಡೆಗಟ್ಟದ್ದಿದ್ರೆ ಸಾವು ಕಟ್ಟಿಟ್ಟಬುತ್ತಿ | Lung Cancer

Lung Cancer: ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಗೆ ತುತ್ತಾದವರ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿದೆ. ವಯಸ್ಸಿನ…

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…