ಕೈರಂಪಣಿ ಫಂಡ್‌ಗೆ ಮೀನು ಸುಗ್ಗಿ

blank

ಪಡುಬಿದ್ರಿ: ಕಾಪು ಬೀಚ್ ಲೈಟ್ ಹೌಸ್‌ನ ಬಂಡೆಯ ಸುತ್ತಲಿನ ಪ್ರದೇಶದಲ್ಲಿ ಎರ್ಮಾಳು ಶ್ರೀ ಲಕ್ಷ್ಮೀ ಜನಾರ್ದನ ಕೈರಂಪಣಿ ಫಂಡ್‌ನವರು ಶುಕ್ರವಾರ ಬೆಳಗ್ಗೆ ಬೀಸಿದ ಬಲೆಗೆ ಏಕಕಾಲದಲ್ಲಿ ಭಾರಿ ಪ್ರಮಾಣದಲ್ಲಿ ಮೀನುಗಳು ಸಿಕ್ಕಿವೆ.

ನಿರೀಕ್ಷೆಗೂ ಮೀರಿ, ನೂರು ಪಟ್ಟು ವಿವಿಧ ಜಾತಿಯ ಟನ್‌ಗಟ್ಟಲೆ ಮೀನುಗಳು ಲಭಿಸಿದ್ದು, ಮೀನು ತುಂಬಿದ ಬಲೆಯನ್ನು ದಡಕ್ಕೆ ಎಳೆಯಲು ಮೀನುಗಾರರು ದಿನವಿಡೀ ಶ್ರಮಿಸಿದರು. ಉತ್ತಮ ಜಾತಿಯ ಮೀನುಗಳನ್ನು ಸ್ಥಳದಲ್ಲೇ ವಿಂಗಡಿಸಿ ಬಂದರಿಗೆ ಸಾಗಿಸಿದರೆ, ಲೋಡ್‌ಗಟ್ಟಲೆ ಸಣ್ಣ ಮೀನುಗಳನ್ನು ಫಿಶ್‌ಮಿಲ್‌ಗೆ ಸಾಗಿಸಲಾಗಿದೆ. ಸ್ಥಳದಲ್ಲಿ ಕಡಿಮೆ ಬೆಲೆಗೆ ಮೀನು ಮಾರಾಟ ನಡೆಯಿತು. ಸಮುದ್ರ ಪಾಲಾದ ಮತ್ತು ಬಲೆಯಿಂದ ಜಿಗಿದು ದಡ ಸೇರಿದ ಮೀನುಗಳನ್ನು ಹಿಡಿಯಲು ಭಾರಿ ಜನ ಸೇರಿದ್ದರು.

ಮಳೆ – ಮೋಡಗಳ ಚೆಲ್ಲಾಟದಿಂದಾಗಿ ಮೀನುಗಳು ಸಹಜವಾಗಿ ತಂಪಿರುವ ಜಾಗಕ್ಕೆ ಬಂದು ಸೇರುತ್ತವೆ. ಜತೆಗೆ ಕಡಲು ಕೂಡ ಸಣ್ಣದಾಗಿರುವುದರಿಂದ ಗಾಳಿಯ ದಿಕ್ಕನ್ನು ಆಧರಿಸಿ ಮೀನುಗಳು ದಡಕ್ಕೆ ಬರುತ್ತವೆ.
‘ಬಲೆಗೆ ಭಾರಿ ಪ್ರಮಾಣದಲ್ಲಿ ಮೀನು ಬಿದ್ದದ್ದು ಖುಷಿ ಕೊಟ್ಟಿದೆ.

ಆದರೆ ಅದನ್ನು ಸಮರ್ಪಕವಾಗಿ ನಿರ್ವಹಿಸಲಾಗದೆ ಸಮಸ್ಯೆಯಾಯಿತು. ಬಲೆಯಲ್ಲಿ ಸಿಲುಕಿದ ಮೀನುಗಳ ಪೈಕಿ ಲಕ್ಷಾಂತರ ರೂ. ಮೌಲ್ಯದ ಮೀನುಗಳು ಬಲೆ ತುಂಡಾಗಿ ಮತ್ತೆ ಕಡಲು ಸೇರಿವೆ’ ಎಂದು ಎರ್ಮಾಳು ಶ್ರೀ ಲಕ್ಷ್ಮೀ ಜನಾರ್ದನ ಕೈರಂಪಣಿ ಫಂಡ್‌ನ ಪ್ರತಿನಿಧಿ ಸೋಮನಾಥ್ ಸುವರ್ಣ ಪ್ರತಿಕ್ರಿಯಿಸಿದ್ದಾರೆ.

Share This Article

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…

ಕೂದಲು ಉದುರುವ ಸಮಸ್ಯೆ ಪರಿಹಾರಕ್ಕೆ ರಾಮಬಾಣ ಹರಳೆಣ್ಣೆ ಹೇರ್​​ ವಾಶ್​​​; ನಿಮಗಾಗಿ ಹೆಲ್ತಿ ಮಾಹಿತಿ | Health Tips

ನಮ್ಮ ಕೂದಲನ್ನು ಸ್ವಚ್ಛವಾಗಿಡಲು ಮತ್ತು ಕೂದಲು ಉದುರುವುದನ್ನು ತಡೆಯಲು ಏನೆನೋ ಮಾಡುತ್ತೇವೆ. ನಮ್ಮ ಕೂದಲಿನ ಬೆಳವಣಿಗೆಯ…