ವಿಜಯವಾಣಿ ಸುದ್ದಿಜಾಲ ರಾಣೆಬೆನ್ನೂರ
ಕೆಎಸ್ಆರ್ಟಿಸಿ ಅಂತರ್ ರಾಜ್ಯ ಹಾಗೂ ಜಿಲ್ಲೆ ಬಸ್ಗಳನ್ನು ಗ್ರಾಮಕ್ಕೆ ನಿಲುಗಡೆ ಮಾಡಬೇಕು ಎಂದು ಆಗ್ರಹಿಸಿ ತಾಲೂಕಿನ ಕಾಕೋಳ ಗ್ರಾಮಸ್ಥರು ಭಾನುವಾರ ರಾಷ್ಟ್ರೀಯ ಹೆದ್ದಾರಿ-4ರ ಮೇಲ್ಸೇತುವೆಯಲ್ಲಿ ಬಸ್ ಸಂಚಾರ ತಡೆದು ಧರಣಿ ನಡೆಸಿದರು.
ಈ ಹಿಂದೆ ಗ್ರಾಮಕ್ಕೆ ನಿಲುಗಡೆ ಮಾಡುತ್ತಿದ್ದ ಬಸ್ಗಳು ಇದೀಗ ಮೇಲ್ಸೇತುವೆ ನಿರ್ವಣವಾದ ದಿನದಿಂದ ಗ್ರಾಮದೊಳಗೆ ಬರುವ ಬದಲು ಮೇಲ್ಸೇತುವೆ ಮೂಲಕ ಸಂಚರಿಸುತ್ತಿವೆ. ಇದರಿಂದಾಗಿ ಗ್ರಾಮಸ್ಥರಿಗೆ ತೀವ್ರ ತೊಂದರೆ ಉಂಟಾಗಿದೆ. ಗ್ರಾಮಸ್ಥರು ರಾಣೆಬೆನ್ನೂರ, ಹಾವೇರಿ ಸೇರಿ ಬೇರೆ ಬೇರೆ ಊರುಗಳಿಗೆ ತೆರಳಲು ಪರದಾಡುವ ಸ್ಥಿತಿ ನಿರ್ವಣವಾಗಿದೆ. ಈ ಹಿಂದಿನಂತೆ ಬಸ್ಗಳನ್ನು ಗ್ರಾಮಕ್ಕೆ ನಿಲುಗಡೆ ಮಾಡಬೇಕು ಎಂದು ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಆದ್ದರಿಂದ ಸಾರಿಗೆ ಘಟಕದ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವವರೆಗೂ ಬಸ್ಗಳನ್ನು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.
ಸ್ಥಳಕ್ಕೆ ಬಂದ ತಾಲೂಕು ಸಾರಿಗೆ ಘಟಕದ ವ್ಯವಸ್ಥಾಪಕ ಆರ್.ಸಿ. ಪಾಟೀಲ ಮಾತನಾಡಿ, ಗ್ರಾಮದ ಬಸ್ಗಳ ಸಮಸ್ಯೆ ಕುರಿತು ಮೇಲಧಿಕಾರಿಗಳೊಂದಿಗೆ ಮಾತನಾಡಿ ಎರಡ್ಮೂರು ದಿನದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
ನಂತರ ಧರಣಿ ಹಿಂತೆಗೆದುಕೊಳ್ಳಲಾಯಿತು. ಗ್ರಾಮದ ಯುವಕರು, ಮುಖಂಡರು ಹಾಗೂ ಹಿರಿಯರು ಪಾಲ್ಗೊಂಡಿದ್ದರು.