ಹೆಸರು, ಉದ್ದು ಖರೀದಿ ಕೇಂದ್ರ ಆರಂಭಿಸಿ

blank

ಕಲಬುರಗಿ: ರಾಜ್ಯ ಸರ್ಕಾರದಿಂದ ಕೂಡಲೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹೆಸರು, ಉದ್ದು ಖರೀದಿ ಕೇಂದ್ರ ಆರಂಭಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ್ ಆಗ್ರಹಿಸಿದ್ದಾರೆ.

ಪ್ರಸಕ್ತ ವರ್ಷ ಉತ್ತಮ ಮಳೆ ಆಗಿರುವುದರಿಂದ, ಎಲ್ಲೆಡೆ ಭರ್ಜರಿಯಾಗಿ ಹೆಸರು, ಉದ್ದು ಬೆಳೆಯಲಾಗಿದೆ. ಈಗಾಗಲೇ ಶೇ.50 ಹೆಸರು ರಾಶಿ ಪೂರ್ಣಗೊಂಡಿದೆ. ಎಕರೆಗೆ 4ರಿಂದ 5 ಕ್ವಿಂಟಾಲ್ ಇಳುವರಿ ಬರುತ್ತಿದ್ದು, ಆದರೆ ಸರ್ಕಾರ ಮಾತ್ರ ಇಲ್ಲಿವರೆಗೂ ಖರೀದಿ ಕೇಂದ್ರ ಆರಂಭಿಸಿಲ್ಲ. ಇದರಿಂದ ರೈತರು ಚಿಂತೆಯಲ್ಲಿದ್ದಾರೆ. ಮಾರುಕಟ್ಟೆಯಲ್ಲಿ ದರ ಕುಸಿದಿದ್ದು, ರೈತರಿಗೆ ಏನು ಮಾಡಬೇಕು ಎಂಬುದು ತೋಚದಂತಾಗಿದೆ. ಕೇಂದ್ರ ಸರ್ಕಾರ ಹೆಸರು ಕಾಳಿನ ದರವನ್ನು ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ 8,682 ರೂ. ದರ ನಿಗದಿಪಡಿಸಿದೆ. ಉದ್ದಿನ ಕಾಳಿಗೆ 7,400 ರೂ. ನಿಗದಿಪಡಿಸಲಾಗಿದೆ. ರಾಜ್ಯ ಸರ್ಕಾರ ಇದೇ ದರಕ್ಕೆ ಹೆಸರು ಮತ್ತು ಉದ್ದು ಖರೀದಿಸಿದರೆ ಬೆಳೆಗಾರರ ನೆರವಿಗೆ ಬಂದAತಾಗುತ್ತದೆ ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Share This Article

ರಾತ್ರಿ ವೇಳೆ ಮಾವಿನ ಹಣ್ಣು ತಿನ್ನಬಾರದು! ಯಾಕೆ ಗೊತ್ತಾ? mango

mango: ಬೇಸಿಗೆಯಲ್ಲಿ ಹೆಚ್ಚು ಇಷ್ಟವಾಗುವ ಹಣ್ಣು ಮಾವಿಹಣ್ಣು. ಇದು ವಿಟಮಿನ್ ಎ, ಸಿ, ಫೈಬರ್, ಉತ್ಕರ್ಷಣ…

ಅಕ್ಷಯ ತೃತೀಯ ಹಬ್ಬಕ್ಕೂ ಮುನ್ನ ನಿಮ್ಮ ಮನೆಯಿಂದ ಈ ವಸ್ತುಗಳನ್ನು ತೆಗೆದುಹಾಕಿ..  Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಲಕ್ಷ್ಮಿ ದೇವಿಯ ಹಬ್ಬವೆಂದು ಪರಿಗಣಿಸಲಾಗುತ್ತದೆ.  ಚಿನ್ನದ ಅಂಗಡಿಗಳು ವ್ಯಾಪಾರದಿಂದ…

ಕಬ್ಬಿನ ರಸವನ್ನು ಎಷ್ಟು ದಿನ ಸಂಗ್ರಹಿಸಬಹುದು..ಈ ಜ್ಯೂಸ್​​ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳಿವು..Sugarcane Juice

  Sugarcane Juice: ಕಬ್ಬಿನ ಜ್ಯೂಸ್​​ ಬೇಸಿಗೆಯಲ್ಲಿ ಎಲ್ಲರೂ ಹೆಚ್ಚು ಇಷ್ಟಪಡುವ ಆರೋಗ್ಯಕರ ಪಾನೀಯಗಳಲ್ಲಿ ಒಂದಾಗಿದೆ.…