ಕಲಬುರಗಿ: ಪ್ರೇಮ ವೈಫಲ್ಯಕ್ಕೆ ಮನನೊಂದು ನಿನ್ನೆ ಕೆರೆಗೆ ಹಾರಿದ್ದ ಅತಿಥಿ ಉಪನ್ಯಾಸಕರೊಬ್ಬರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.
ಕಲಬುರಗಿಯ ಅಪ್ಪನ ಕೆರೆಗೆ ಹಾರಿ ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರನ್ನು ಅಂಬರೀಶ್ (35) ಎಂದು ಗುರುತಿಸಲಾಗಿದೆ. ಈತ ನಗರದ ಲಾಲ್ಗೇರಿ ಕ್ರಾಸ್ನ ನಿವಾಸಿ.
ನಿನ್ನೆ ಮನೆಗೆ ಫೋನ್ ಮಾಡಿ ಹೇಳಿ ಕೆರೆಗೆ ಹಾರಿದ್ದರು ಎಂದು ಹೇಳಲಾಗಿದೆ. ತೀವ್ರ ಶೋಧ ಕಾರ್ಯಾಚರಣೆ ಬಳಿಕ ಇಂದು ಬೆಳಗ್ಗೆ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣ ಎಂದು ತಿಳಿದುಬಂದಿದೆ.
ಆತ್ಮಹತ್ಯೆ ಸಂಬಂಧ ಕಲಬುರಗಿಯ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)
ಮೇಕೆದಾಟು ಯೋಜನೆ ವಿವಾದ ಸಂಬಂಧ ನಾಳೆ ಕಾನೂನು ತಜ್ಞರ ಮಹತ್ವದ ಸಭೆ: ಬಸವರಾಜ ಬೊಮ್ಮಾಯಿ
ಹಳ್ಳಿಗಳಲ್ಲಿ ಪಾಸಿಟಿವ್ ಆದವರನ್ನು ಮನೆಯಲ್ಲಿ ಬಿಡಬೇಡಿ: ಸಿಎಂ ಬಿಎಸ್ವೈ ಸೂಚನೆ