ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಯಾನಗುಂದಿ ಕ್ಷೇತ್ರದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಣಿಕೇಶ್ವರಿ ಅಮ್ಮ (87) ಲಿಂಗೈಕ್ಯರಾದರು.
ಕರ್ನಾಟಕ ರಾಜ್ಯ ಮಾತ್ರವಲ್ಲದೆ ನೆರೆಯ ಆಂಧ್ರ, ತೆಲಂಗಾಣ, ಮಹಾರಾಷ್ಟ್ರ ಸೇರಿ ವಿವಿಧೆಡೆಯ ಲಕ್ಷಾಂತರ ಮಂದಿ ಅಮ್ಮನಿಗೆ ಭಕ್ತರಿದ್ದಾರೆ. ಅಮ್ಮ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ದೇವಸ್ಥಾನಕ್ಕೆ ಭಕ್ತರು ದೌಡಾಯಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇಂದು ಸಂಜೆಯಿಂದ ಮಾತಾ ಮಾಣಿಕೇಶ್ವರಿ ಅಮ್ಮನ ಆರೋಗ್ಯದಲ್ಲಿ ಏರುಪೇರಾಗಿತ್ತು.
ಯಾನಾಗುಂದಿ ಮಾತಾ ಮಾಣಿಕೇಶ್ವರಿ ಸಂಸ್ಥಾನದ ಪೀಠಾಧಿಪತಿ ಮಾತಾ ಮಾಣಿಕೇಶ್ವರಿ ಅಮ್ಮ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಾಣಿಕೇಶ್ವರಿ ಸಂಸ್ಥಾನದ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಲಾಗಿತ್ತು.
ಕಲ್ಯಾಣ ಕರ್ನಾಟಕ ಮತ್ತು ನರೆಯ ರಾಜ್ಯಗಳಲ್ಲಿ ಅಪಾರ ಭಕ್ತರನ್ನು ಹೊದಿದ್ದ ಅಮ್ಮನವರು, ನಡೆದಾಡುವ ದೇವರು ಅಂತಲೇ ಖ್ಯಾತಿ ಪಡೆದಿದ್ದರು.