More

    ಮತ್ತೆ ಸುತ್ತುತ್ತಿದೆ ‘ಕಾಲಚಕ್ರ’ … ‘ತರಗೆಲೆ ಸಂಸಾರ …’ ಹಾಡು ಬಿಡುಗಡೆ

    ವಸಿಷ್ಠ ಸಿಂಹ ಅಭಿನಯಿಸಿರುವ ‘ಕಾಲಚಕ್ರ’ ಚಿತ್ರವು ಇಷ್ಟರಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ, ಕರೊನಾ ಮತ್ತು ಲಾಕ್​ಡೌನ್​ನಿಂದಾಗಿ, ‘ಕಾಲಚಕ್ರ’ವೂ ನಿಂತಿತ್ತು. ಇದೀಗ ಮತ್ತೆ ಸುತ್ತುವುದಕ್ಕೆ ಶುರುವಾಗಿದೆ.

    ಇದನ್ನೂ ಓದಿ: ರಣವೀರ್​​ ಪ್ರೊಡಕ್ಷನ್​ ಕಂಪನಿ ಹೆಸರು ಕೇಳಿದ್ರೆ ಶಾಕ್​ ಆಗ್ತೀರ!

    ಹೌದು, ಕಳೆದ ನಾಲ್ಕು ತಿಂಗಳುಗಳಿಂದ ಚಿತ್ರದ ಬಗ್ಗೆ ಯಾವುದೇ ಸುದ್ದಿ ಇರಲಿಲ್ಲ. ಇದೀಗ ಚಿತ್ರತಂಡದವರು ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದ್ದಾರೆ. ‘ತರಗೆಲೆ ಸಂಸಾರ …’ ಎಂಬ ಹಾಡನ್ನು ವರಮಹಾಲಕ್ಷ್ಮೀ ಹಬ್ಬದಂದು ಸಂಜೆ ಯೂಟ್ಯೂಬ್​ನ ಆನಂದ್​ ಆಡಿಯೋ ಚಾನಲ್​ ಮೂಲಕ ಬಿಡುಗಡೆ ಮಾಡಲಾಗಿದೆ. ಸಂತೋಷ್ ನಾಯಕ್ ರಚಿಸಿರುವ ಈ ಹಾಡನ್ನು ಕೈಲಾಶ್​ ಖೇರ್ ಹಾಡಿದ್ದಾರೆ‌. ಇನ್ನು ಗುರುಕಿರಣ್​ ಸಂಗೀತ ಸಂಯೋಜಿಸಿದ್ದಾರೆ.

    ‘ಕಾಲಚಕ್ರ’ ಚಿತ್ರವನ್ನು ರಶ್ಮಿ ಫಿಲಂಸ್ ಬ್ಯಾನರ್​ನಡಿ ರಶ್ಮಿ ನಿರ್ಮಿಸುತ್ತಿದ್ದು, ಈ ಹಿಂದೆ ‘ನಾನಿ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ರಾಘವೇಂದ್ರ, ಈ ಚಿತ್ರವನ್ನು ಸುಮಂತ್​ ಕ್ರಾಂತಿ ಎಂಬ ಹೆಸರಲ್ಲಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಕಥೆಯನ್ನೂ ಅವರೇ ರಚಿಸಿದ್ದು, ಸೈಕಲಾಜಿಕಲ್ ಕಥಾ ಹಂದರವಿರುವ ಈ ಚಿತ್ರಕ್ಕೆ ಬೆಂಗಳೂರು, ಮಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ.

    ಲಾಕ್​ಡೌನ್​ಗೂ ಮುನ್ನ, ಸುದೀಪ್​ ಅವರು ಚಿತ್ರದ ಟೀಸರ್​ ಬಿಡುಗಡೆ ಮಾಡಿದ್ದರು. ಈಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ಟ್ರೇಲರ್​ ಟ್ರೇಲರ್​ ಮತ್ತು ಹಾಡುಗಳನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಯೋಚಿಸಿದೆ.

    ಇದನ್ನೂ ಓದಿ: ಸಂಭಾವನೆಯಲ್ಲಿ ರಾಜಮೌಳಿಯನ್ನೂ ಮೀರಿಸ್ತಿದ್ದಾರೆ ಕೊರಟಾಲ ಶಿವ

    ‘ಕಾಲಚಕ್ರ’ ಚಿತ್ರದಲ್ಲಿ ವಸಿಷ್ಠ ಸಿಂಹ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮಿಕ್ಕಂತೆ ರಕ್ಷ, ದೀಪಕ್ ಶೆಟ್ಟಿ, ಸುಚೇಂದ್ರ ಪ್ರಸಾದ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಎಲ್​.ಎಂ. ಸೂರಿ ಛಾಯಾಗ್ರಹಣ ಈ ಚಿತ್ರಕ್ಕಿದ್ದು, ಬಿ.ಎ. ಮಧು ಸಂಭಾಷಣೆ ರಚಿಸಿದ್ದಾರೆ. ಚಿತ್ರದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಅಂತಿಮ ಹಂತದಲ್ಲಿದ್ದು, ಈ ವರ್ಷದ ಕೊನೆ ಅಥವಾ ಮುಂದಿನ ವರ್ಷ ಚಿತ್ರ ಬಿಡುಗಡೆಯಾಗಲಿದೆ.

    ಸುಶಾಂತ್​ ಸಾಯುವ ಮುನ್ನ ಗೂಗಲ್​ನಲ್ಲಿ ಸರ್ಚ್​ ಮಾಡಿದ್ದೇನು?; ಮುಂಬೈ ಪೊಲೀಸ್​ ನೀಡಿದ್ದಾರೆ ಅಚ್ಚರಿಯ ಮಾಹಿತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts