ಲಿಂಗಸುಗೂರು: ಕಾಳಾಪುರ ಗ್ರಾಪಂ ವ್ಯಾಪ್ತಿಯ ಐದನಾಳ ಗ್ರಾಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವಕ್ಕೆ ಮೂಲ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಾಪಂ ಎಫ್ಡಿಸಿ ಚಾಂದಪಾಷಾಗೆ ಮಂಗಳವಾರ ಮನವಿ ಸಲ್ಲಿಸಿದರು.
ಮೂಲ ಸೌಕರ್ಯ ಕಲ್ಪಿಸಿ
ಗ್ರಾಮದಲ್ಲಿ ರಸ್ತೆ, ಚರಂಡಿ, ಜಂಗಲ್ ಕಟಿಂಗ್, ಸ್ವಚ್ಛತೆ, ಬೀದಿ ದೀಪ ಸೇರಿದಂತೆ ಅನೇಕ ಸಮಸ್ಯೆಗಳು ತಾಂಡವವಾಡುತ್ತಿವೆ. ಗ್ರಾಪಂಗೆ ಗ್ರಾಮದಿಂದ ಮೂರು ಜನ ಸದಸ್ಯರು ಆಯ್ಕೆಗೊಂಡಿದ್ದರೂ ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ. ಗ್ರಾಪಂ ಪಿಡಿಒ ಗ್ರಾಮದತ್ತ ಸುಳಿಯುತ್ತಿಲ್ಲ. ಚರಂಡಿ ನೀರು ರಸ್ತೆ ಹರಿಯುತ್ತಿದ್ದು, ಕಲುಷಿತ ವಾತಾವರಣ ನಿರ್ಮಾಣಗೊಂಡು ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಗ್ರಾಪಂ ಪಿಡಿಒ ಮೇಲೆ ಕ್ರಮ ಕೈಗೊಂಡು ಗ್ರಾಮದಲ್ಲಿ ಮೂಲ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿದರು.
ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ: ಸಿಎಂ ಸಿದ್ದರಾಮಯ್ಯ