ಕಳತ್ತೂರು ಗರಡಿಯ ವಿಜ್ಞಾಪನಾಪತ್ರ ಬಿಡುಗಡೆ

blank

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಕಳತ್ತೂರು ಪಾದೂರು ಬ್ರಹ್ಮಬೈದರ್ಕಳ ಗರಡಿ 2.65ಕೋಟಿ ರೂ. ವೆಚ್ಚದಲ್ಲಿ ಸಮಗ್ರ ಜೀರ್ಣೋದ್ಧಾರಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ವಿಜ್ಞಾಪನಾ ಪತ್ರವನ್ನು ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ ಭಾನುವಾರ ಬಿಡುಗಡೆಗೊಳಿಸಿದರು.

ಬ್ರಹ್ಮಬೈದೆರ್ಕಳರ ಸಾನ್ನಿಧ್ಯದಲ್ಲಿ ಪೂಜೆ ಹಾಗೂ ಸಾಮೂಹಿಕ ಪ್ರಾರ್ಥನೆ ನೆರವೇರಿಸಲಾಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಯಕೃಷ್ಣ ಆಳ್ವ ಪಾದೂರುಗುತ್ತು ಅಧ್ಯಕ್ಷತೆ ವಹಿಸಿದ್ದರು. ಜೀರ್ಣೋದ್ಧಾರ ಸಮಿತಿಯ ಗೌರವ ಅಧ್ಯಕ್ಷರಾದ ಜಗದೀಶ ಶೆಟ್ಟಿ ನಡೆಗುತ್ತು, ರವೀಂದ್ರ ಜಿ.ಶೆಟ್ಟಿ ಬರೆಬೆಟ್ಟುಗುತ್ತು, ಕರುಣಾಕರ ಪೂಜಾರಿ ನಟ್ಟಿಲ್, ಸಮಿತಿಯ ಸಲಹೆಗಾರರಾದ ಸುಧಾಕರ ಡಿ.ಅಮೀನ್ ಪಾಂಗಾಳ, ಅರುಣಾಕರ ಡಿ.ಶೆಟ್ಟಿ, ಮಜೂರು ಗ್ರಾಪಂ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು, ಕುತ್ಯಾರು ಗ್ರಾಪಂ ಅಧ್ಯಕ್ಷ ಜನಾರ್ದನ ಆಚಾರ್ಯ, ಶಿರ್ವ ಬ್ರಹ್ಮಶ್ರೀ ನಾರಾಯಣಗುರು ಮಂದಿರ ಅಧ್ಯಕ್ಷ ಗೋಪಾಲ ಪೂಜಾರಿ, ಶ್ರೀಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ ಟ್ರಸ್ಟಿ ಸಂತೋಷ್ ಕುಮಾರ್ ಬೈರಂಪಳ್ಳಿ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಂಗನಾಥ ಶೆಟ್ಟಿ ಬರೆಬೈಲು ಗುತ್ತು, ಅರ್ಚಕ ವಿಶ್ವನಾಥ್ ಅಮೀನ್ ಗರಡಿಮನೆ ಉಪಸ್ಥಿತರಿದ್ದರು. ಜತೆ ಕಾರ್ಯದರ್ಶಿ ಸುಕೇಶ್ ಪೂಜಾರಿ ವಳದೂರು ಸ್ವಾಗತಿಸಿದರು. ಅರ್ಚಕ ಗುರುರಾಜ ಪೂಜಾರಿ ಪ್ರಸ್ತಾವನೆಗೈದರು. ಉಪಾಧ್ಯಕ್ಷ ಪ್ರಕಾಶ್ ಪಾಲಮೆ ವಂದಿಸಿದರು. ಜತೆ ಕಾರ್ಯದರ್ಶಿ ಅತಿಥ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

blank

ಹಿರಿಯಡಕ ಶಾಲೆಗೆ ತಡೆಗೋಡೆ ನಿರ್ಮಾಣ

ಅರಾಟೆ ಪೈಗಳಹಿತ್ಲು ನಾಗಬನದಲ್ಲಿ ನಾಗಮಂಡಲೋತ್ಸವ

 

Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…