ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

koteshwara

ಕೋಟ: ಏಕಾಗ್ರತೆಯಿಂದ ಗುರಿಯೆಡೆಗೆ ಪಯಣಿಸಿದರೆ ಯಾವುದೇ ಸಾಧನೆ ಸಾಧ್ಯವಾಗುತ್ತದೆ ಎಂದು ಶಾರದಾ ಕಾಲೇಜು ಬಸ್ರೂರು ಪ್ರಾಂಶುಪಾಲೆ ಚಂದ್ರಾವತಿ ಶೆಟ್ಟಿ ಹೇಳಿದರು.

ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಅಂಚೆ ಕೋಟೇಶ್ವರ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲ ಡಾ.ರಾಜೇಂದ್ರ ಎಸ್.ನಾಯಕ ಅಧ್ಯಕ್ಷತೆ ವಹಿಸಿದ್ದರು. ಶೈಕ್ಷಣಿಕವಾಗಿ ಸಾಧನೆಗೈದ ವಿದ್ಯಾರ್ಥಿಗಳ ಬಹುಮಾನಿತರ ಪಟ್ಟಿ ಇತಿಹಾಸ ವಿಭಾಗ ಮುಖ್ಯಸ್ಥ ಗಣೇಶ ಪೈ ಎಂ., ಸಾಂಸ್ಕೃತಿಕ ವಿಭಾಗದ ಬಹುಮಾನಿತರ ಪಟ್ಟಿ, ಚುನಾವಣಾ ಸಾಕ್ಷರತಾ ಸಂಘದ ಬಹುಮಾನಿತರ ಪಟ್ಟಿ ಮತ್ತು ವಿಶೇಷ ಸಾಧಕರ ಪಟ್ಟಿ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ.ಭಾಗೀರಥಿ ನಾಯ್ಕ, ಕ್ರೀಡಾ ವಿಭಾಗದ ಬಹುಮಾನಿತರ ಪಟ್ಟಿ ದೈಹಿಕ ಶಿಕ್ಷಣ ನಿರ್ದೇಶಕ ಕಿರಣ ವಿಷ್ಣು ಪಟಗಾರ, ರೋವರ್ಸ್‌-ರೇಂಜರ್ಸ್‌ ವಿಭಾಗ ಬಹುಮಾನಿತರ ಪಟ್ಟಿ ವಾಣಿಜ್ಯಶಾಸ್ತ್ರ ವಿಭಾಗದ ಕಾರ್ತಿಕ್ ಪೈ ವಾಚಿಸಿದರು. ವಾರ್ಷಿಕ ವರದಿ ಐಕ್ಯೂಎಸಿ ಸಂಚಾಲಕ ನಾಗರಾಜ ಯು., ನಾಗರಾಜ ವೈದ್ಯ ಎಂ.ಪ್ರತಿಭಾ ದಿನಾಚರಣೆ ಬಹುಮಾನಿತರ ಪಟ್ಟಿ ವಾಚಿಸಿದರು.

ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಪ್ರಭಾಕರ ಖಾರ್ವಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಮರಾಯ ಆಚಾರ್ಯ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಉಪ ಕಾರ್ಯದರ್ಶಿ ಪವಿತ್ರಾ ಮರಾಠಿ ವಂದಿಸಿದರು. ಡಾ.ವೆಂಕಟರಾಮ ಭಟ್ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಮನೋರಂಜನ ಕಾರ್ಯಕ್ರಮ ನಡೆಯಿತು.

Share This Article

ಕಡಿಮೆ ಸಮಯದಲ್ಲಿ ಮನೆಯಲ್ಲೇ ಮಾಡಿ ರುಚಿಕರ ಆಲೂಪೂರಿ; ಇಲ್ಲಿದೆ ಸುಲಭ ವಿಧಾನ | Recipe

ದಿನ ನಿತ್ಯ ಒಂದೇ ರೀತಿಯ ಬೆಳಗ್ಗಿನ ತಿಂಡಿ ತಿಂದು ಬೇಸರವಾಗಿರುತ್ತದೆ. ಆದರೆ ಏನಾದರೂ ವಿಶೇಷವಾದ ಬ್ರೇಕ್​ಫಾಸ್ಟ್​…

ಉಗುರಿನಲ್ಲಿ ಅಡಗಿದೆ ನಿಮ್ಮ ಆರೋಗ್ಯದ ರಹಸ್ಯ; ಹೇಗೆ ಅಂತೀರಾ.. ಈ ಮಾಹಿತಿ ನೋಡಿ | Health Tips

ಒಬ್ಬ ವ್ಯಕ್ತಿಯನ್ನು ನೋಡುವ ಮೂಲಕ ಅವನ ಬಗ್ಗೆ ಬಹಳಷ್ಟು ಹೇಳಬಹುದು. ಆದರೆ ಉಗುರುಗಳು ನಿಮ್ಮ ಆರೋಗ್ಯದ…

ಬೆಟ್ಟದ ನೆಲ್ಲಿಕಾಯಿ- ಅಲೋವೆರಾ ಕೂದಲಿನ ಆರೈಕೆಗೆ ಯಾವುದು ಬೆಸ್ಟ್​​; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಹುಡುಗನಾಗಲಿ ಅಥವಾ ಹುಡುಗಿಯಾಗಲಿ ಇಬ್ಬರಿಗೂ ತಮ್ಮ ಕೂದಲಿನ ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಪ್ರಸಕ್ತ ಜೀವನಶೈಲಿ,…