More

    ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘವು 2023ನೇ ಸಾಲಿನ ನಾನಾ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಲೇಖಕಿಯರಿಂದ ಕೃತಿಗಳನ್ನು ಆಹ್ವಾನಿಸಿದೆ.

    ಪ್ರಶಸ್ತಿಗಳು ನಗದು ಹಾಗೂ ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ. ಜೂ.23ರಂದು ಬೆಳಗ್ಗೆ 10 ಗಂಟೆಗೆ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷೆ ಡಾ. ಎಚ್.ಎಲ್. ಪುಷ್ಪ ತಿಳಿಸಿದ್ದಾರೆ.

    ಕಾಕೋಳು ಸರೋಜಮ್ಮ (ಕಾದಂಬರಿ), ಭಾಗ್ಯ ನಂಜಪ್ಪ (ವಿಜ್ಞಾನ ಸಾಹಿತ್ಯ,) ನಾಗರತ್ನ ಚಂದ್ರಶೇಖರ್ (ಲಲಿತ ಪ್ರಬಂಧ), ಜಿ.ವಿ. ನಿರ್ಮಲ (ಭಾರತದ ಯಾವುದೇ ಭಾಷೆಯ ಅನುವಾದಿತ ಕಾದಂಬರಿ/ ಕಥಾ ಸಂಕಲನ/ ಜೀವನ ಚರಿತ್ರೆ), ತ್ರಿವೇಣಿ ಸಾಹಿತ್ಯ ಪುರಸ್ಕಾರ ( ಪ್ರಾಯೋಜಕರು – ಸುಧಾಮೂರ್ತಿ- ಸಣ್ಣಕಥೆ/ ಕಾದಂಬರಿ), ಕಮಲಾ ರಾಮಸ್ವಾಮಿ (ಪ್ರವಾಸ ಸಾಹಿತ್ಯ), ನುಗ್ಗೆಹಳ್ಳಿ ಪಂಕಜ (ಹಾಸ್ಯ ಕೃತಿ), ಗುಣಸಾಗರಿ ನಾಗರಾಜ್ (ಮಕ್ಕಳ ಸಾಹಿತ್ಯ), ಇಂದಿರಾ ವಾಣಿರಾವ್ (ನಾಟಕ), ಜಯಮ್ಮ ಕರಿಯಣ್ಣ (ಸಂಶೋಧನೆ), ತ್ರಿವೇಣಿ ದತ್ತಿನಿಧಿ ( ಕಥೆ/ ಕಾದಂಬರಿ- ಪ್ರಥಮ, ದ್ವಿತೀಯ, ತೃತೀಯ), ಉಷಾ. ಪಿ. ರೈ ( ಕವನ ಸಂಕಲನ )-(2021- 2022- 2023 ಈ ಮೂರು ವರ್ಷಗಳಲ್ಲಿ ಪ್ರಕಟಗೊಂಡ ಕವನ ಸಂಕಲನ ), ನಿರುಪಮಾ ದತ್ತಿ ಪ್ರಶಸ್ತಿಗೆ ಡಿಜಿಟಲ್ ಮಾಧ್ಯಮದಲ್ಲಿ ಪ್ರಕಟಗೊಂಡ ಕಥೆಗಳು ಹಾಗೂ ಮುದ್ರಣ ಮಾಧ್ಯಮದಲ್ಲಿ ಪ್ರಕಟಗೊಂಡ ಕಥೆಗಳನ್ನು ಸಲ್ಲಿಸಬಹುದಾಗಿದೆ.

    ಆಸಕ್ತರು ಮೇ 23ರೊಳಗೆ ಕೃತಿಗಳನ್ನು ತಲುಪಿಸಬೇಕು. ಕೃತಿಗಳನ್ನು ತಲುಪಬೇಕಾದ ವಿಳಾಸ: ಕರ್ನಾಟಕ ಲೇಖಕಿಯರ ಸಂಘ (ರಿ), ನಂ. 206, 2ನೇ ಮಹಡಿ, ವಿಜಯ ಮ್ಯಾನ್ಷನ್, 2ನೇ ತಿರುವು, 2ನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು-18.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts