ತರೀಕೆರೆ: ಪಟ್ಟಣ ಸೇರಿ ತಾಲೂಕಿನೆಲ್ಲೆಡೆ ಪುಷ್ಯಾ ಮಳೆ ಅಬ್ಬರಿಸುತ್ತಿದ್ದು, ಪ್ರಸಿದ್ಧ ಪ್ರವಾಸಿ ತಾಣಗಳಾದ ಹೆಬ್ಬೆ ಜಲಪಾತ ಮತ್ತು ಕಲ್ಲತ್ತಿಗಿರಿ ಜಲಪಾತಗಳಿಗೆ ಜೀವಕಳೆ ಬಂದಿದೆ. ಕೆಮ್ಮಣ್ಣುಗುಂಡಿ ಗಿರಿಶ್ರೇಣಿಗಳಲ್ಲಿ ಭರ್ಜರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೆಬ್ಬೆ ಜಲಪಾತ, ಕಲ್ಲತ್ತಿ ಜಲಪಾತ ಭೋರ್ಗರೆದು ಧುಮ್ಮಿಕ್ಕುತ್ತಿವೆ. ಭಾನುವಾರ ಎರಡು ಜಲಪಾತಗಳ ಸೊಬಗನ್ನು ಕಣ್ತುಂಬಿಕೊಳ್ಳಲು ಜಿಲ್ಲೆಯ ವಿವಿಧ ಭಾಗಗಳಿಂದ ಮಾತ್ರವಲ್ಲ, ಹೊರ ಜಿಲ್ಲೆ, ರಾಜ್ಯಗಳ ನೂರಾರು ಪ್ರವಾಸಿಗರು ಆಗಮಿಸಿದ್ದರು.