More

    ಲೋಕಸಭೆ ಚುನಾವಣೆ; ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸಲು ಕಮಲ್ ಹಾಸನ್​ ಆಸಕ್ತಿ

    ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೊಯಮತ್ತೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತವನ್ನು ಬಹುಭಾಷಾ ನಟ, ಮಕ್ಕಳ್​ ನೀತಿ ಮೈಯಂ (MNM) ಪಕ್ಷದ ಮುಖ್ಯಸ್ಥ ಕಮಲ್​ ಹಾಸನ್​ ವ್ಯಕ್ತಪಡಿಸಿದ್ದಾರೆ. ಅವರ ಈ ಮಾತು ತಮ್ಮ ಪಕ್ಷವು ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಶೀಲ ಮೈತ್ರಿಕೂಟಕ್ಕೆ (SPA) ಸೇರುತ್ತದೆ ಎಂಬ ಊಹಾಪೋಹಗಳಿಗೆ ಪುಷ್ಠಿ ನೀಡಿದೆ.

    2021ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕೆಲವೇ ಮತಗಳ ಅಂತರದಲ್ಲಿ ಸೋಲುಂಡಿದ್ದರು.

    ಇದನ್ನೂ ಓದಿ: VIDEO| ಸಂಸದರು ಗರ್ಭಗುಡಿಯಲ್ಲಿನ ದೇವರ ಮೂರ್ತಿಗಳಿದ್ದಂತೆ ಯಾವುದೇ ಅಧಿಕಾರವಿಲ್ಲ: ರಾಹುಲ್​ ಗಾಂಧಿ

    ಪಕ್ಷದ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಕಮಲ್​ ಹಾಸನ್​ ಜನರು ನನ್ನ ಚಿತ್ರಗಳನ್ನು ಬಂದು ವೀಕ್ಷಿಸುವ ಹಾಗೆ ನನಗೆ ಏಕೆ ಮತ ಹಾಕುವುದಿಲ್ಲ. ಹಾಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲು ಸಿದ್ದತೆ ಆರಂಭಿಸಿದ್ದೇನೆ ಎಂದು ಹೇಳುವ ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

    2024ರ ಲೋಕಸಭೆ ಚುನಾವಣೆಯಲ್ಲಿ ಮಕ್ಕಳ್​ ನೀತಿ ಮೈಯಂ (MNM) ಪಕ್ಷವು ತಮಿಳುನಾಡು ಸಿಎಂ ಸ್ಟಾಲಿನ್​ ನೇತೃತ್ವದ ಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ತಮ್ಮ ಪಕ್ಷಕ್ಕೆ ಹೆಚ್ಚಿನ ಲಾಭವಾಗುವ ನಿಟ್ಟಿನಲ್ಲಿ ಕಮಲ್​ ಹಾಸನ್​ ಈ ಮೈತ್ರಿಗೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts