ದೇಶಾದ್ಯಂತ ಲಾಕ್ಡೌನ್ 3.0 ಜಾರಿಯಲ್ಲಿದೆ. ನಿಯಮಗಳಲ್ಲಿ ಒಂದಷ್ಟು ಸಡಿಲಿಕೆ ಮಾಡಿ ಏನಿರುತ್ತೆ, ಏನಿರಲ್ಲ ಎಂಬುದನ್ನು ಆಯಾ ಸರ್ಕಾರಗಳು ಘೋಷಣೆ ಮಾಡಿಕೊಂಡಿವೆ. ಕರ್ನಾಟಕದಲ್ಲೂ ಲಾಕ್ಡೌನ್ ಸಡಿಲಿಕೆ ಆಗಿ ಮದ್ಯ ಮಾರಾಟ, ಅಂಗಡಿ ಮುಂಗಟ್ಟುಗಳು ತೆರೆದಿವೆ. ಹೀಗಿರುವಾಗ ಪಕ್ಕದ ತಮಿಳು ನಾಡಿನಲ್ಲೂ ಮದ್ಯ ಮಾರಾಟಕ್ಕೆ ದಿನಾಂಕ ನಿಗದಿಯಾಗಿದೆ. ಆದರೆ, ಅಲ್ಲಿನ ಸರ್ಕಾರದ ಈ ನಿರ್ಧಾರಕ್ಕೆ ಕಮಲ್ ಹಾಸನ್ ಕಿಡಿಕಾರಿದ್ದಾರೆ. ಸರ್ಕಾರದ ನಡೆಗೆ ಛೀಮಾರಿ ಹಾಕಿದ್ದಾರೆ.
ಇದನ್ನೂ ಓದಿ: ನೋಡಲಾಗಲಿಲ್ಲ ಬಾಯಾರಿದವರ ಬಾಧೆ.. ಯೋಗರಾಜ್ ಭಟ್ ಕಡೆಯಿಂದ ಬಂತು ಹೊಸ ಗೀತೆ
‘ಸರ್ಕಾರ ಕೋಯಂಬೇಡು ಮಾರುಕಟ್ಟೆಯನ್ನು ಕರೊನಾದಿಂದ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇಂಥ ಸಂದರ್ಭದಲ್ಲಿ ಮದ್ಯದ ಅಂಗಡಿಗಳನ್ನು ತೆರೆಯುತ್ತಿರುವುದು ಎಷ್ಟರ ಮಟ್ಟಿಗೆ ಸರಿ. ಸರ್ಕಾರದ ಈ ತಪ್ಪು ಹೆಜ್ಜೆಯಿಂದಾಗಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಬೆಲೆತೆರಬೇಕಾಗುತ್ತದೆ ಎಂಬುದು ಗೊತ್ತಾಗುತ್ತಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: VIDEO| ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ವರ್ಕೌಟ್ ನೋಡಿದ್ರೆ, ನೀವು ಖಂಡಿತ ದಂಗಾಗ್ತಿರಾ!
ಮೇ. 4ರಂದು ಕರ್ನಾಟಕದಲ್ಲಿ ಮದ್ಯ ಮಾರಾಟ ಆರಂಭವಾಗಿದ್ದೇ ತಡ, ಪಕ್ಕದ ರಾಜ್ಯಗಳಲ್ಲಿಯೂ ಈ ಸುದ್ದಿ ಮುಟ್ಟಿತ್ತು. ಅಷ್ಟೇ ಅಲ್ಲ ಒಂದೇ ದಿನಕ್ಕೆ ಬರೋಬ್ಬರಿ 50 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿತ್ತು. ಇದನ್ನು ಗಮನದಲ್ಲಿಟ್ಟುಕೊಂಡೇ ತಮಿಳುನಾಡಿನಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಿದೆ. ಇದನ್ನೇ ಗಂಭೀರವಾಗಿ ಪರಿಗಣಿಸಿದ ಕಮಲ್, ಬೇರೆ ರಾಜ್ಯಗಳು ಅನುಮತಿ ನೀಡಿವೆ ಎಂದ ಮಾತ್ರಕ್ಕೆ ನಮ್ಮಲ್ಲೂ ಅನುಮತಿ ನೀಡಲೇಬೇಕಾ ಎಂದು ತಮಿಳುನಾಡು ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಸದ್ಯ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಕಮಲ್ ಹಾಸನ್ ಪ್ರತಿಕ್ರಿಯೆಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. (ಏಜೆನ್ಸೀಸ್)