ನೀವು ನನ್ನ ಧ್ವನಿಯಾಗಿದ್ದೀರಾ, ನಾನು ನಿಮ್ಮ ಧ್ವನಿಗೆ ಮುಖವಾಗಿದ್ದೇನೆ.. ಬೇಗ ಬನ್ನಿ

blank

ಎಸ್​ಪಿ ಬಾಲಸುಬ್ರಮಣ್ಯಂ ಕಳೆದ ನಾಲ್ಕು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚೇತರಿಕೆಗೆ ಇಡೀ ದೇಶ ಪ್ರಾರ್ಥಿಸುತ್ತಿದೆ. ಸೆಲೆಬ್ರಿಟಿಗಳು ಸೋಷಿಯಲ್​ ಮೀಡಿಯಾದಲ್ಲಿ ಮರಳಿ ಬನ್ನಿ ಎಂದು ಅವರೊಟ್ಟಿಗೆ ಕಳೆದ ದಿನಗಳನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಇದೀಗ ಸೌತ್ ಸೂಪರ್​ಸ್ಟಾರ್ ಕಮಲ್​ ಹಾಸನ್​ ಸಹ ಅವರ ಚೇತರಿಕೆಗೆ ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: ಮರಣೋತ್ತರ ವಿಶೇಷ ಪ್ರಶಸ್ತಿಗೆ ಭಾಜನರಾಗುತ್ತಿದ್ದಾರೆ ಸುಶಾಂತ್​; ಯಾವುದಾ ಅವಾರ್ಡ್ ಗೊತ್ತಾ?

‘ನನ್ನ ನಲ್ಮೆಯ ಸಹೋದರನೇ, ನಾವೆಲ್ಲ ನಿಮ್ಮ ಬರುವಿಕೆಗಾಗಿ ಕಾಯುತ್ತಿದ್ದೇವೆ. ತುಂಬ ವರ್ಷಗಳಿಂದ ನನ್ನ ಧ್ವನಿಯಾಗಿದ್ದೀರಿ. ನಿಮ್ಮ ಧ್ವನಿಗೆ ನಾನು ಮುಖವಾಗಿದ್ದೇನೆ. ನಿಮ್ಮ ಧ್ವನಿ ಕೇಳಬೇಕೆನಿಸುತ್ತಿದೆ. ಮರಳಿ ಬನ್ನಿ. ಆದಷ್ಟು ಬೇಗ ಬನ್ನಿ’ ಎಂದಿದ್ದಾರೆ.

ಕಮಲ್​ ಹಾಸನ್​ ಮತ್ತು ಎಸ್​ಪಿಬಿ ಹಲವು ದಶಕಗಳಿಂದ ಸ್ನೇಹಿತರು. ಕಮಲ್​ ಅವರ ಸಾಕಷ್ಟು ಸಿನಿಮಾಗಳಿಗೆ ಎಸ್​ಪಿಬಿ ಧ್ವನಿ ನೀಡಿದ್ದಾರೆ. ಅಷ್ಟೇ ಅಲ್ಲ ಕಮಲ್​ ಅವರ ಎಷ್ಟೋ ಸಿನಿಮಾಗಳಿಗೆ ಡಬ್​ ಸಹ ಮಾಡಿದ್ದಾರೆ. ಇದೀಗ ಆ ಗೆಳೆಯ ಆದಷ್ಟು ಬೇಗ ಗುಣಮುಖನಾಗಿ ಆಗಮಿಸಲಿ ಎಂದು ಸೋಷಿಯಲ್​ ಮೀಡಿಯಾದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸೈಫ್​ 50 ನೇ ವರ್ಷದ ಬರ್ತ್​​ಡೇಗೆ ಪತ್ನಿ ಕರೀನಾ ನೀಡಿದ ಉಡುಗೊರೆ ಇದು…

ಆಗಸ್ಟ್ 5 ರಂದು ಕರೊನಾ ಸೋಂಕಿಗೆ ತುತ್ತಾಗಿದ್ದ ಎಸ್​ಪಿಬಿ, ಗುರುವಾರ ಹೆಚ್ಚುವರಿ ಚಿಕಿತ್ಸೆಗೆಂದು ಐಸಿಯುಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡು ಬಂದಿರುವ ಬಗ್ಗೆ ಆಸ್ಪತ್ರೆ ವೈದ್ಯರು ಮತ್ತು ಎಸ್​ಪಿಬಿ ಪುತ್ರ ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್​)

ಪುಟಾಣಿಗಳ ರಕ್ಷಣೆಗೆ ಧಾವಿಸಿದ ನಟ ಶಶಿಕುಮಾರ್

Share This Article

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…