ಭೋಪಾಲ್: ಮಧ್ಯ ಪ್ರದೇಶದ ವಿಧಾನಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ಕಮಲ್ನಾಥ್ ರಾಜೀನಾಮೆ ನೀಡಿದ್ದು, ಈ ಮೂಲಕ ಕಾಂಗ್ರೆಸ್ಗೆ ಮತ್ತೊಮ್ಮೆ ಹಿನ್ನಡೆಯಾಗಿದೆ.
ವಿಪಕ್ಷ ನಾಯಕ ಸ್ಥಾನಕ್ಕೆ ಭಾನುವಾರವೇ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯನ್ನು ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ಗುರುವಾರ ಸ್ವೀಕರಿಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
ಈ ಸ್ಥಾನಕ್ಕೆ ಗೋವಿಂದ್ ಸಿಂಗ್ ಎಂಬುವವರನ್ನು ನೇಮಿಸಲಾಗಿದ್ದು, ಕಮಲ್ ನಾಥ್ ಅವರು ರಾಜ್ಯಾಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.
ಕಮಲನಾಥ್ ಪದತ್ಯಾಗಕ್ಕೆ ಸೂಕ್ತ ಕಾರಣ ನೀಡದ ಕಾಂಗ್ರೆಸ್ 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ನಲ್ಲಿ ಈ ಬದಲಾವಣೆ ತರಲಾಗಿದೆ ಎನ್ನಲಾಗಿದೆ.