More

    ಕೆಟ್ಟು ನಿಂತ ಬಸ್ ಪ್ರಯಾಣಿಕರ ಪರದಾಟ

    ಕಮಲಾಪುರ: ಮಹಾಗಾಂವ್ ಕ್ರಾಸ್‌ನಲ್ಲಿ ಕಲಬುರಗಿಯಿಂದ ಚಿಂಚೋಳಿ ತಾಲೂಕಿನ ಹುಳಗೇರಿ ಗ್ರಾಮಕ್ಕೆ ಹೊರಟಿದ್ದ ಸಾರಿಗೆ ಬಸ್ ಗುರುವಾರ ಮಧ್ಯಾಹ್ನ ಕೆಟ್ಟಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಸರ್ಕಲ್ ಬಳಿಯ ಸೇತುವೆ ಮೇಲೆ ನೀರು ಹರಿದು ರಾಜ್ಯ ಹೆದ್ದಾರಿಯಲ್ಲಿ ತಗ್ಗು ಬಿದ್ದಿದ್ದರಿಂದ ಬಸ್‌ನ ಎಕ್ಸಲ್​ ಮುರಿದಿದೆ. ಈ ಮಾರ್ಗದಲ್ಲಿ ಭಾರಿ ವಾಹನಗಳು, ಬಸ್, ಟೆಂಪೋ, ಕಾರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವುದರಿಂದ ಹೆದ್ದಾರಿ ದಿನೇದಿನೆ ಹಾಳಾಗುತ್ತಿದೆ. ಸೇತುವೆ ನಿರ್ಮಿಸುವಂತೆ ಬೇಡಿಕೆಗೆ ಇದುವರೆಗೆ ಸ್ಪಂದನೆ ಸಿಕ್ಕಿಲ್ಲ. ಈಗಲಾದರೂ ಸಂಬಂಧಿತ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts