More

    ಕಂಬಳದ ‘ರನ್​ ವೀರ’ ಶ್ರೀನಿವಾಸ ಗೌಡ ಇಂದು ವಿಧಾನಸೌಧಕ್ಕೆ; ಮುಖ್ಯಮಂತ್ರಿ ಯಡಿಯೂರಪ್ಪನವರಿಂದ ಸನ್ಮಾನ

    ಮಂಗಳೂರು: ಕಂಬಳದಲ್ಲಿ ವೇಗವಾಗಿ ಓಡುವ ಮೂಲಕ ವಿಶ್ವದ ಅತ್ಯಂತ ವೇಗದ ಓಟಗಾರ ಎನಿಸಿಕೊಂಡಿರುವ ಉಸಾನ್​ ಬೋಲ್ಟ್​ರನ್ನೂ ಹಿಂದಿಕ್ಕಿದ್ದ ಶ್ರೀನಿವಾಸ್​ ಗೌಡ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

    ಮುಖ್ಯಮಂತ್ರಿ ಯಡಿಯೂರಪ್ಪನವರ ಆಹ್ವಾನದ ಮೇರೆಗೆ ಇಂದು ಮಧ್ಯಾಹ್ನ ಸುಮಾರು 2ಗಂಟೆ ಹೊತ್ತಿಗೆ ವಿಧಾನಸೌಧಕ್ಕೆ ಬರಲಿದ್ದಾರೆ.

    ಶ್ರೀನಿವಾಸ ಗೌಡ ಅವರು ಕಂಬಳ ಅಕಾಡೆಮಿ ಸಂಚಾಲಕ ಗುಣಪಾಲ್​ ಕಡಂಬ ಮತ್ತು ವಾರ್ತಾ ಇಲಾಖೆ ಸಿಬ್ಬಂದಿಯೊಂದಿಗೆ ಆಗಮಿಸಲಿದ್ದಾರೆ.

    ಇದನ್ನೂ ಓದಿ: ಕೇಂದ್ರ ಕ್ರೀಡಾ ಸಚಿವರ ಕಣ್ಣಿಗೆ ಬಿದ್ದ ಕಂಬಳ ಓಟಗಾರ: ಉಸೇನ್​ ಬೋಲ್ಟ್​ಗಿಂತಲೂ ವೇಗವಾಗಿ ಓಡುವ ಈತನಿಗೆ ಸಿಗುತ್ತಾ ಒಲಿಂಪಿಕ್ಸ್​ನಲ್ಲಿ ಭಾಗವಹಿಸುವ ಅವಕಾಶ?

    ಶ್ರೀನಿವಾಸ ಗೌಡ ಅವರಿಗೆ ಕ್ರೀಡಾ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸನ್ಮಾನ ಮಾಡಲಿದ್ದಾರೆ.

    ಕಂಬಳವೀರ ಶ್ರೀನಿವಾಸ ಗೌಡ ಅವರು ಈಗಾಗಲೇ ಕೇಂದ್ರ ಕ್ರೀಡಾ ಸಚಿವ ಕಿರಣ್​ ರಿಜಿಜು ಅವರ ಗಮನ ಸೆಳೆದಿದ್ದಾರೆ. ಶ್ರೀನಿವಾಸ್ ಗೌಡ ಅವರನ್ನು ಒಲಿಂಪಿಕ್ಸ್​ಗೆ ಕಳಿಸುವ ಬಗ್ಗೆಯೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.(ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts