ಮಂಗಳೂರು: ಕಂಬಳದಲ್ಲಿ ವೇಗವಾಗಿ ಓಡುವ ಮೂಲಕ ವಿಶ್ವದ ಅತ್ಯಂತ ವೇಗದ ಓಟಗಾರ ಎನಿಸಿಕೊಂಡಿರುವ ಉಸಾನ್ ಬೋಲ್ಟ್ರನ್ನೂ ಹಿಂದಿಕ್ಕಿದ್ದ ಶ್ರೀನಿವಾಸ್ ಗೌಡ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪನವರ ಆಹ್ವಾನದ ಮೇರೆಗೆ ಇಂದು ಮಧ್ಯಾಹ್ನ ಸುಮಾರು 2ಗಂಟೆ ಹೊತ್ತಿಗೆ ವಿಧಾನಸೌಧಕ್ಕೆ ಬರಲಿದ್ದಾರೆ.
ಶ್ರೀನಿವಾಸ ಗೌಡ ಅವರು ಕಂಬಳ ಅಕಾಡೆಮಿ ಸಂಚಾಲಕ ಗುಣಪಾಲ್ ಕಡಂಬ ಮತ್ತು ವಾರ್ತಾ ಇಲಾಖೆ ಸಿಬ್ಬಂದಿಯೊಂದಿಗೆ ಆಗಮಿಸಲಿದ್ದಾರೆ.
ಶ್ರೀನಿವಾಸ ಗೌಡ ಅವರಿಗೆ ಕ್ರೀಡಾ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸನ್ಮಾನ ಮಾಡಲಿದ್ದಾರೆ.
ಕಂಬಳವೀರ ಶ್ರೀನಿವಾಸ ಗೌಡ ಅವರು ಈಗಾಗಲೇ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರ ಗಮನ ಸೆಳೆದಿದ್ದಾರೆ. ಶ್ರೀನಿವಾಸ್ ಗೌಡ ಅವರನ್ನು ಒಲಿಂಪಿಕ್ಸ್ಗೆ ಕಳಿಸುವ ಬಗ್ಗೆಯೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.(ದಿಗ್ವಿಜಯ ನ್ಯೂಸ್)