ಕಂಬಾರು ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

Bdk_Brahmakalasha

ಕುಂಬಳೆ: ಕಂಬಾರು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ 2025ರ ಜನವರಿ 28ರಿಂದ ಫೆಬ್ರವರಿ 2ರ ತನಕ ಜರುಗಲಿರುವ ಪುನಃಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಇತ್ತೀಚೆಗೆ ಕುಡಾಲು ಬಾಡೂರು ಗ್ರಾಮಸ್ಥರ ಸಭೆ ನಡೆಸಿ ಸಮಿತಿ ರಚಿಸಲಾಯಿತು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಇ.ಎಸ್.ಮಹಾಬಲೇಶ್ವರ ಭಟ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರದ ಆಡಳಿತ ಮೊಕ್ತೇಸರ ಬಾಡೂರು ಯಜಮಾನ ಕುಂಞಣ್ಣ ಭಂಡಾರಿ, ಮೊಕ್ತೇಸರರಾದ ರವಿಶಂಕರ್ ಭಟ್ ಹಾಗೂ ಕುಡಾಲು ಗುತ್ತು ದಿವಾಕರ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಿದ್ಧತೆ ಹಾಗೂ ಅನುಷ್ಠಾನಕ್ಕೆ ಮಾರ್ಗದರ್ಶಕ ಮಂಡಳಿ, ಜೀರ್ಣೋದ್ಧಾರ ಸಮಿತಿ ಹಾಗೂ ಹದಿನಾರು ಉಪಸಮಿತಿಗಳನ್ನು ರಚಿಸಲಾಯಿತು. ವಿವಿಧ ಸಮಿತಿಗಳ ವಿಸ್ತರಣೆ ಹಾಗೂ ಜವಾಬ್ದಾರಿ ಹಂಚಿಕೆಗಾಗಿ ನವೆಂಬರ್ 16ರಂದು ಮಧ್ಯಾಹ್ನ 3ಕ್ಕೆ ಎಲ್ಲ ಸಮಿತಿಗಳು ಹಾಗೂ ಕಾರ್ಯಕರ್ತರ ಸಭೆ ನಡೆಸಲು ನಿರ್ಧರಿಸಲಾಯಿತು.

ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಕೋಳಾರು ಸತೀಶ್ಚಂದ್ರ ಭಂಡಾರಿ ಸ್ವಾಗತಿಸಿದರು. ಮೊಕ್ತೇಸರ ನೆರಿಯ ಹೆಗಡೆ ಲಕ್ಷ್ಮೀನಾರಾಯಣ ಭಟ್ ಪ್ರಾರ್ಥನೆ ಸಲ್ಲಿಸಿದರು. ರಾಜಾರಾಮ ಶೆಟ್ಟಿ ಕುಡಾಲು ವಂದಿಸಿದರು.

ಸಂಚಾರಕ್ಕೆ ಸಿದ್ಧಗೊಂಡ ಪಾದಚಾರಿ ಸೇತುವೆ

ಅರಿಬೈಲಿನಲ್ಲಿ ನೂತನ ಅಶ್ವತ್ಥಕಟ್ಟೆ ನಿರ್ಮಾಣ

 

Share This Article

ನಿಮ್ಮ ಸ್ಮಾರ್ಟ್​ಫೋನ್​ ನಿಮ್ಮ ಫಿಟ್​ನೆಸ್​ ಕೋಚ್​… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone

Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…

ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast

breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…