blank

ತೋಳ ಧಾಮಕ್ಕೆ ತಹಸೀಲ್ದಾರ್ ಭೇಟಿ

Bankapura Wolf Sanctuary

ಕನಕಗಿರಿ: ತಾಲೂಕಿನ ಬಂಕಾಪುರ ತೋಳ ಧಾಮದಲ್ಲಿ ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದ ಹಿನ್ನೆಲೆಯಲ್ಲಿ ತಹಸೀಲ್ದಾರ್ ವಿಶ್ವನಾಥ ಮುರುಡಿ ಸೋಮವಾರ ಧಾಮಕ್ಕೆ ಭೇಟಿ ನೀಡಿ, ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಸುಭಾಷ್‌ಚಂದ್ರ ಅವರಿಂದ ತೋಳ ಸೇರಿ ಇತರ ಜೀವ ವೈವಿಧ್ಯ ಹಾಗೂ ಇಲಾಖೆಯ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು.

ಅಳಿವಿನ ಅಂಚಿನಲ್ಲಿರುವ ಪ್ರಾಣಿ ತೋಳದ ಸಂತತಿ ರಕ್ಷಣೆ ಜತೆಗೆ ಆಹಾರ ಸರಪಳಿ ಸೃಷ್ಟಿಸಲು ಇಂಥ ಪ್ರಾಣಿಗಳ ರಕ್ಷಣೆ ಗತ್ಯವಾಗಿದ್ದು, ಅತಿ ಹೆಚ್ಚು ತೋಳಗಳ ಪ್ರದೇಶವೆಂದು ಗುರುತಿಸಿ ರಾಜ್ಯದ ಮೊದಲ ತೋಳ ಧಾಮವನ್ನು ತಾಲೂಕಿನ ಬಂಕಾಪುರದಲ್ಲಿ ಆರಂಭಿಸಿರುವುದು ಸಂತಸದ ವಿಚಾರ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕೈಗೊಂಡ ಕ್ರಮಗಳ ಬಳಿಕ ತೋಳ 8 ಮರಿಗಳಿಗೆ ಜನ್ಮ ನೀಡಿದ್ದು, ಕ್ಯಾಮರಾದಲ್ಲಿ ಸೆರೆಯಾಗಿದೆ.

ಇಲಾಖೆ ಸಚಿವರು ಸಂತಸ ವ್ಯಕ್ತಪಡಿಸಿದ್ದು, ಪ್ರವಾಸಿ ತಾಣವನ್ನಾಗಿಸಲು ಸ್ಥಳ ವೀಕ್ಷಣೆ ಮಾಡಲಾಗಿದೆ. ಅಧಿಕಾರಿಗಳು ಧಾಮದಲ್ಲಿ ಜನಸಂಚಾರ ನಿಷೇಧಿಸಿರುವ ಕುರಿತು ತಿಳಿಸಿದರು.

Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…