ಆಷಾಢ ಶುದ್ಧ ಏಕಾದಶಿ ಆಚರಣೆ ಜೋರು

PANDU RANGA

ಕನಕಗಿರಿ: ಪಂಢರಾಪುರದ ಶ್ರೀ ಪಾಂಡುರಂಗನ ಭಕ್ತರಿಗೆ ಪವಿತ್ರ ದಿನವಾದ ಆಷಾಢ ಶುದ್ಧ ಏಕಾದಶಿ ನಿಮಿತ್ತ ಇಲ್ಲಿನ ಕಲಕೇರಿ ರಸ್ತೆಯ ಶ್ರೀ ಪಾಂಡುರಂಗ ರುಕ್ಮಿಣಿ ದೇವಸ್ಥಾನದಲ್ಲಿ ಬುಧವಾರ ವಿಶೇಷ ಪೂಜೆ ನೆರವೇರಿತು.

blank
blank

ದೇವಸ್ಥಾನದಲ್ಲಿ ಬೆಳಗ್ಗೆ ಪಾಂಡುರಂಗ ಹಾಗೂ ರುಕ್ಮಿಣಿ ದೇವರ ಮೂರ್ತಿಗೆ ತುಳಸಿ ಹಾಗೂ ಹೂವಿನ ಹಾರದಿಂದ ಅಲಂಕರಿಸಲಾಗಿತ್ತು. ನಂತರ ಕಾಕಡಾರತಿ, ಪಂಚಾಮೃತ ಅಭಿಷೇಕ, ತುಳಸಿ, ಪುಷ್ಪಾರ್ಚನೆ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಭಕ್ತರು ಪಾಂಡುರಂಗ-ರುಕ್ಮಿಣಿ ಕೀರ್ತನೆಗಳನ್ನು ಹಾಡಿ ಭಕ್ತಿ ಸಮರ್ಪಿಸಿದರು. ಹಲವು ಭಕ್ತರು ಉಪವಾಸವಿದ್ದು ಆಷಾಢ ಏಕಾದಶಿ ಆಚರಿಸಿದರು.

ಅನಂತಪ್ಪ ಧಾಯಪುಲ್ಲೆ, ಪುಂಡಲೀಕಪ್ಪ ಧಾಯಪುಲ್ಲೆ, ರಮೇಶ ಅಚ್ಚಲಕರ, ಪಾಂಡುರಂಗ ಜನಾದ್ರಿ, ಮೋಹನ ಅಚ್ಚಲಕರ, ಶಶಿಕುಮಾರ ಬೊಂದಾಡೆ, ಗುರುರಾಜ, ಶಿವಕುಮಾರ ಇತರರು ಇದ್ದರು.

Share This Article

ಅಧಿಕ ನೀರು ಕುಡಿಯುವುದರಿಂದ ಈ 6 ದೊಡ್ಡ ಸಮಸ್ಯೆಗಳು ಕಾಡಬಹುದಂತೆ! | Drinking water

Drinking water:ಸಾಮಾನ್ಯವಾಗಿ ನೀರು ಕುಡಿಯವುದರಿಂದ ಅನೇಕ ರೋಗದ ಸಮಸ್ಯೆಗಳು ದೂರುವಾಗುತ್ತದೆ. ಅಲ್ಲದೆ, ಆರೋಗ್ಯಕ್ಕೆ ಊಟ ಎಷ್ಟು…

ಪದೇಪದೆ ವಿವಾಹದ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ? ಈ ಕ್ರಮಗಳು ಅನುಸರಿಸಿ; ಮದುವೆಯ ಅಡೆತಡೆಗಳನ್ನು ನಿವಾರಿಸಿ | Marriage Proposals

Marriage Proposals : ಜೀವನದ ಅತಿದೊಡ್ಡ ತಿರುವು ಎಂದ್ರೆ ಅದು ಮದುವೆ. ಮದುವೆ ಎಂದ್ರೆ ಎಲ್ಲರಿಗೂ…

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…