ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಕೆಗೆ ಖಂಡನೆ: ಕನಕಗಿರಿಯಲ್ಲಿ ರೈತ ಸಂಘ-ಹಸಿರು ಸೇನೆ ಪ್ರತಿಭಟನೆ

blank

ಕನಕಗಿರಿ: ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಕೆಗೆ ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿತು.

ಸಂಘದ ಕಾರ್ಯದರ್ಶಿ ಭೀಮನಗೌಡ ಜೀರಾಳ ಮಾತನಾಡಿ, ಮಾತೆತ್ತಿದರೆ ರೈತರೇ ದೇಶದ ಬೆನ್ನೆಲುಬು ಎಂದು ಹೇಳುವ ರಾಜ್ಯ ಸರ್ಕಾರವು ಜಮೀನುಗಳಲ್ಲಿನ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುವ ಹುನ್ನಾರ ನಡೆಸಿದೆ. ಈ ಮೂಲಕ ಈಗಾಗಲೇ ಕೃಷಿಯಿಂದ ಬೇಸತ್ತಿರುವ ರೈತರಿಗೆ ಬೇಸಾಯದ ಕಡೆಗೆ ತಿರುಗಿ ನೋಡದಂತೆ ಮಾಡಲು ಮುಂದಾಗಿದೆ. ಈಗಾಗಲೇ ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ನಡುವೆ ಸರ್ಕಾರ ಮೀಟರ್ ಅಳವಡಿಸಲು ಮುಂದಾಗಿರುವುದು ರೈತರ ಹೊಟ್ಟೆಯ ಮೇಲೆ ಬರೆ ಎಳೆಯುವ ಕೆಲಸವಾಗಿದೆ. ಕೃಷಿ ಸಾಲ ಮನ್ನಾ ಮಾಡುವುದು ಬೇಡ. ಅದರ ಬದಲು ಸಮರ್ಪಕ ರಸಗೊಬ್ಬರ, ಬೀಜ, ನೀರು ಹಾಗೂ ಉಚಿತ ವಿದ್ಯುತ್, ಬೆಳ ಎಂಎಸ್‌ಪಿ ಘೋಷಿಸಿದರೆ ರೈತರು ಆರ್ಥಿಕವಾಗಿ ಪ್ರಗತಿ ಸಾಧಿಸಲಿದ್ದಾರೆ ಎಂದರು. ತಹಸೀಲ್ದಾರ್ ಧನಂಜಯ ಮಾಲಗಿತ್ತಿಗೆ ಮನವಿ ಸಲ್ಲಿಸಲಾಯಿತು.

ಮುಖಂಡರಾದ ಶಿವಕುಮಾರ ಬಡಿಗೇರ, ಯಮನೂರಪ್ಪ ಬಂಗಾರಿ, ಮರಿಸ್ವಾಮಿ, ವೆಂಕಟೇಶ ಮಲ್ಲಿಗೆವಾಡ, ಜಡಿಯಪ್ಪ ನಿರ್ಲೂಟಿ, ಶೇಖರಪ್ಪ ಗದ್ದಿ, ಹನುಮೇಶ ಪೂಜಾರಿ, ಹನುಮಂತಪ್ಪ ಬಂಡ್ರಾಳ, ಹುಲಗಪ್ಪ, ತಿಮ್ಮನಗೌಡ, ರಾಜಾಸಾಬ್, ಬಾಲರಾಜ್, ನಾಗಪ್ಪ, ಈರಣ್ಣ ಗಾಣದಾಳ, ಈಶಪ್ಪ ಹೊಸ್ಕೇರಾ, ಹನುಮಂತ ಹೊಸ್ಕೇರಾ ಇತರರಿದ್ದರು.

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…