ಮುಂಬೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಜೀವನವನ್ನಾಧರಿಸಿದ ‘ತಲೈವಿ’ ಚಿತ್ರವು ಸೆಪ್ಟೆಂಬರ್ 10ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಆದರೆ, ಲಾಕ್ಡೌನ್ನಿಂದ ಮಹಾರಾಷ್ಟ್ರದಲ್ಲಿ ಇನ್ನೂ ಚಿತ್ರಮಂದಿರಗಳು ತೆರೆದಿಲ್ಲ, ಚಿತ್ರಪ್ರದರ್ಶನ ಪ್ರಾರಂಭವಾಗಿಲ್ಲ. ಕರೊನಾ ಕೇಸ್ಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರಪ್ರದರ್ಶನವನ್ನು ಪ್ರಾರಂಭಿಸುವಂತೆ ಕಂಗನಾ ರಣಾವತ್ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ರಾಮ್ ಚರಣ್ ಬೇಡ ಅಂದಿದ್ರೂ ಸಮಂತಾ ಲಿಪ್ಲಾಕ್: ರಂಗಸ್ಥಳಂ ಚಿತ್ರದ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟ ನಿರ್ದೇಶಕ!
ದೇಶದಲ್ಲಿ ಕರೊನಾ ಕೇಸ್ಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಸರ್ಕಾರ ಸಹ ಕಳೆದ ಮಾರ್ಚ್ನಲ್ಲಿ ಲಾಕ್ಡೌನ್ ಘೋಷಿಸಿತ್ತು. ಕ್ರಮೇಣ, ಬೇರೆ ರಾಜ್ಯಗಳಲ್ಲಿ ಲಾಕ್ಡೌನ್ ತೆರವಾದರೂ, ಮಹಾರಾಷ್ಟ್ರದಲ್ಲಿ ಮಾತ್ರ ಇನ್ನೂ ತೆರವಾಗಿಲ್ಲ. ಕಳೆದ ತಿಂಗಳ 19ರಂದು ಅಕ್ಷಯ್ ಕುಮಾರ್ ಅಭಿನಯದ ‘ಬೆಲ್ ಬಾಟಂ’ ಚಿತ್ರವು ದೇಶಾದ್ಯಂತ ಬಿಡುಗಡೆಯಾಯಿತು. ಮಹಾರಾಷ್ಟ್ರದಲ್ಲಿ ಚಿತ್ರಪ್ರದರ್ಶನಕ್ಕೆ ಅನುಮತಿ ಸಿಗಬಹದು ಎಂಬ ನಂಬಿಕೆಯಿಂದಲೇ ಚಿತ್ರಬಿಡುಗಡೆಯನ್ನು ಆಗಸ್ಟ್ 19ಕ್ಕೆ ಘೋಷಿಸಲಾಗಿತ್ತು. ಆದರೆ, ಕರೊನಾ ಭಯದಿಂದ ಸರ್ಕಾರ ಚಿತ್ರಪ್ರದರ್ಶನವನ್ನು ಪ್ರಾರಂಭಿಸಲೇ ಇಲ್ಲ. ಅದೇ ಕಾರಣಕ್ಕೆ, ದೇಶದ ಬೇರೆಬೇರೆ ರಾಜ್ಯಗಳಲ್ಲಿ ‘ಬೆಲ್ ಬಾಟಂ’ ಚಿತ್ರವು ಬಿಡುಗಡೆಯಾದರೂ, ಮಹಾರಾಷ್ಟ್ರದಲ್ಲಿ ಮಾತ್ರ ಬಿಡುಗಡೆಯಾಗಲಿಲ್ಲ.
ಈಗ ಇದೇ ಸೆಪ್ಟೆಂಬರ್ 10ರಂದು ‘ತಲೈವಿ’ ಬಿಡುಗಡೆಯಾಗಲಿದೆ. ಈಗಲಾದರೂ ಚಿತ್ರ ಪ್ರದರ್ಶನಕ್ಕೆ ಅನುಮತಿ ಸಿಗಬಹುದು ಮತ್ತು ಚಿತ್ರ ಬಿಡುಗಡೆಯಾಗಬಹುದು ಎಂಬ ಚಿತ್ರತಂಡದ ನಿರೀಕ್ಷೆ ಸುಳ್ಳಾಗುತ್ತಿದೆ. ಬಿಡುಗಡೆಗೆ ಇನ್ನು ಎರಡೇ ದಿನಗಳಿದ್ದರೂ ಸರ್ಕಾರ ಮಾತ್ರ ಚಿತ್ರಪ್ರದರ್ಶನಕ್ಕೆ ಅನುಮತಿ ನೀಡಿಲ್ಲ. ಈ ಸಂಬಂಧ, ಕಂಗನಾ ತಮ್ಮ ಇನ್ಸ್ಟಾಗ್ರಾಂ ಖಾತೆಯ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಸಂಕಷ್ಟದಲ್ಲಿರುವ ಚಿತ್ರರಂಗ ಮತ್ತು ಚಿತ್ರಮಂದಿರಗಳನ್ನು ಉಳಿಸಬೇಕು ಎಂದು ಅವರು ಕೇಳಿಕೊಂಡಿದ್ದಾರೆ.
ಇದನ್ನೂ ಓದಿ: ಗಣೇಶ ಹಬ್ಬಕ್ಕೆ ಲಂಕೆ; ಚಿತ್ರಮಂದಿರಗಳಲ್ಲಿ ಸ್ಟಾರ್ ಕಲರವ…
‘ಮಹಾರಾಷ್ಟ್ರದಲ್ಲಿ ಕರೊನಾ ಕೇಸ್ಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಹಾಗಾಗಿ, ಚಿತ್ರಪ್ರದರ್ಶನವನ್ನು ಪುನಃ ಪ್ರಾರಂಭಿಸುವ ಮೂಲಕ ಚಿತ್ರರಂಗ ಮತ್ತು ಚಿತ್ರಮಂದಿರಗಳನ್ನು ಉಳಿಸಬೇಕು ಎಂದು ಕೇಳಿಕೊಳ್ಳುತ್ತೇನೆ’ ಎಂದು ಮನವಿ ಸಲ್ಲಿಸದ್ದಾರೆ ಕಂಗನಾ. ಆದರೆ, ಕಳೆದ ವರ್ಷ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಹರಿಹಾಯ್ದಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು, ಕಂಗನಾ ಮನವಿಗೆ ಸ್ಪಂದಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಲ್ಯಾಗ್ ಮಂಜು-ದಿವ್ಯಾ ಸುರೇಶ್ ಬಗ್ಗೆ ಹರಿದಾಡ್ತಿರೋ ಸುದ್ದಿ ನಿಜನಾ? ಹೌದು ಅನ್ನುವಂತಿದೆ ಈ ವೈರಲ್ ಫೋಟೋ!