ನವದೆಹಲಿ: ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರನ್ನು ನಿರ್ಭಯಾ ಪ್ರಕರಣದ ಅಪರಾಧಿಗಳ ಜತೆ ಜೈಲಿನಲ್ಲಿಡಬೇಕು ಎಂದು ನಟಿ ಕಂಗನಾ ರಣಾವತ್ ಆಕ್ರೋಷ ವ್ಯಕ್ತಪಡಿಸಿದ್ದಾರೆ.
ನಿರ್ಭಯಾ ಪ್ರಕರಣವನ್ನು ಸಂತ್ರಸ್ಥೆ ತಾಯಿ ಆಶಾದೇವಿ ಅವರು ಕ್ಷಮಿಸಬೇಕು ಎಂಬ ಹೇಳಿಕೆಗೆ ಕಿಡಿ ಕಾರಿರುವ ನಟಿ, ಇಂತಹ ಹೆಣ್ಣುಮಕ್ಕಳೇ ರಾಕ್ಷಸ ಮತ್ತು ರೇಪಿಸ್ಟ್ ಮಕ್ಕಳಿಗೆ ಜನ್ಮ ನೀಡುವುದು ಎಂದಿದ್ದಾರೆ.
ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಸಂತ್ರಸ್ಥೆಯ ತಾಯಿ ಆಶಾದೇವಿ ಅವರು ಕ್ಷಮಿಸಬೇಕು ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಮಾಡಿರುವ ಟ್ವೀಟ್ ಮಾಡಿದ್ದರು.
ಇಂದಿರಾ ಜೈಸಿಂಗ್ ಅವರು ಮಾನವ ಹಕ್ಕುಗಳ ಹೆಸರಿನಲ್ಲಿ ಹಣ ಮಾಡಲು ಈ ರೀತಿ ಹೇಳುತ್ತಿದ್ದಾರೆ, ನನಗೆ ಅವರ ಸಲಹೆ ಅಗತ್ಯ ಇಲ್ಲ ಎಂದು ಸಂತ್ರಸ್ಥೆ ತಾಯಿ ಆಶಾದೇವಿ ಆಕ್ರೋಶ ವ್ಯಕ್ತಪಡಿಸಿದ್ದರು.
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ರಾಜೀವ್ ಗಾಂಧಿ ಹಂತಕರಲ್ಲಿ ಒಬ್ಬಳಾದ ನಳಿನಿಯನ್ನು ಕ್ಷಮಿಸಿ ಮರಣದಂಡನೆ ಶಿಕ್ಷೆಯಿಂದ ಪಾರು ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಇದೇ ರೀತಿ ಆಶಾದೇವಿ ಅವರು ಅಪರಾಧಿಗಳನ್ನು ಕ್ಷಮಿಸಿ ಮಾದರಿಯಾಗಬೇಕು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರು ಎಂದು ಟ್ವೀಟ್ ಮಾಡಿದ್ದರು. (ಏಜೆನ್ಸೀಸ್)
#WATCH Kangana Ranaut on senior lawyer Indira Jaising's statement,'Nirbhaya's mother should forgive the convicts': That lady (Jaising) should be kept in jail with those convicts for four days…Women like them give birth to these kind of monsters and murderers. (22.1) pic.twitter.com/MtNcAca1QG
— ANI (@ANI) January 23, 2020