More

    ಕಚೇರಿಗೆ ಹಾನಿ ಮಾಡಿದ ಮಹಾರಾಷ್ಟ್ರ ಸರ್ಕಾರದ ಮುಂದೆ ನಟಿ ಕಂಗನಾ ಇಟ್ಟ ಬೇಡಿಕೆ ಏನು?

    ಮುಂಬೈ: ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯ ಒಂದು ಭಾಗವನ್ನು ನೆಲಸಮ ಮಾಡಿದ್ದು, ಇದರಿಂದ ನನಗೆ ಅವಮಾನ ಆಗಿದೆ ಎಂದಿರುವ ಬಾಲಿವುಡ್​ ನಟಿ ಕಂಗನಾ ರಣಾವುತ್​ ಇದೀಗ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ.

    ಕೇಂದ್ರ ಸಚಿವ ರಾಮದಾಸ್​ ಅಠಾವಳೆ ಅವರು ಗುರುವಾರ ಮುಂಬೈನಲ್ಲಿ ಕಂಗನಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಬಗ್ಗೆ ಮಾತನಾಡಿರುವ ಸಚಿವರು, ಸುಮಾರು 1 ಗಂಟೆ ಅವರೊಂದಿಗೆ ಮಾತನಾಡಿದೆ. ಮುಂಬೈನಲ್ಲಿ ಇರಲು ಯಾವುದೇ ಭಯವಿಟ್ಟುಕೊಳ್ಳಬೇಡಿ ಎಂದು ಹೇಳಿದ್ದೇನೆ. ಮುಂಬೈ ದೇಶದ ಆರ್ಥಿಕ ರಾಜಧಾನಿ ಮತ್ತು ಇಲ್ಲಿ ವಾಸಿಸಲು ಎಲ್ಲರಿಗೂ ಹಕ್ಕಿದೆ ಎಂದು ಸಚಿವರು, ನಮ್ಮ ಆರ್​ಪಿಐ (ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ) ಪಕ್ಷವು ಸದಾ ನಿಮಗೆ ಬೆಂಬಲವಾಗಿರಲಿದೆ ಎಂದು ಹೇಳಿದರು.

    ಇದನ್ನೂ ಓದಿ: ಪತಿ ಅಂಗಡಿಯಲ್ಲಿ, ಅತ್ತೆ-ಮಾವ ದೇವಸ್ಥಾನದಲ್ಲಿ, ಇತ್ತ ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆಗೆ ಕಾದಿತ್ತು ಶಾಕ್​

    ಕಚೇರಿ ನೆಲಸಮ ಘಟನೆಯಿಂದ ಕಂಗನಾಗೆ ಅವಮಾನ ಆಗಿದೆಯಂತೆ. ಕಳೆದ ಜನವರಿಯಲ್ಲಷ್ಟೇ ನಿರ್ಮಿಸಿದ ಅವಳ ಕಚೇರಿ ಇದೀಗ ಹಾನಿಯಾಗಿದೆ. ಕಟ್ಟಡ ನಿರ್ಮಾಣಕಾರರು 2-3 ಇಂಚು ಹೆಚ್ಚಿನ ಜಾಗದಲ್ಲಿ ನಿರ್ಮಿಸಿದ್ದಾರೆಂಬುದು ಅವರಿಗೆ ತಿಳಿದಿರಲಿಲ್ಲವಂತೆ. ಅಕ್ರಮ ಭಾಗವನ್ನು ಮಾತ್ರ ಬಿಎಂಸಿ ನೆಲಸಮ ಮಾಡಬೇಕಿತ್ತು. ಆದರೆ, ಕಚೇರಿ ಒಳಗಿನ ಗೋಡೆ ಮತ್ತು ಫರ್ನಿಚರ್​ಗಳಿಗೂ ಹಾನಿಯಾಗಿವೆ. ಈ ಬಗ್ಗೆ ಕಂಗನಾ ನ್ಯಾಯಾಲಯ ಮೆಟ್ಟಿಲೇರಲಿದ್ದು, ಪರಿಹಾರಕ್ಕಾಗಿ ಬೇಡಿಕೆ ಇಡಲಿದ್ದಾರೆಂದರು.

    ಬಿಎಂಸಿಯು ಕಂಗನಾಗೆ ತೀವ್ರ ಅನ್ಯಾಯ ಮಾಡಿದೆ ಮತ್ತು ಪ್ರತೀಕಾರದಿಂದ ವರ್ತಿಸಿದೆ ಎಂದು ನಾನು ಅವಳಿಗೆ ಹೇಳಿದೆ. ಯಾವುದೇ ಅನುಮೋದನೆಯನ್ನು ಪಡೆಯದೇ ಬಿಎಂಸಿ ತಂಡ ಬುಲ್ಡೋಜರ್​ ಮತ್ತು ಎಕ್ಸ್​ಕ್ಯಾವೆಟರ್ಸ್​ ಉಪಯೋಗಿಸಿ ಕಟ್ಟಡವನ್ನು ಹಾನಿಗಳಿಸಿದೆ ಎಂದು ಸಚಿವರು ಆರೋಪಿಸಿದ್ದಾರೆ.

    ಆದರೆ, ದಾಖಲಾತಿ ಸಲ್ಲಿಸಲು ನೀಡಿದ್ದ 24 ಗಂಟೆ ಅವಧಿಯಲ್ಲಿ ಕಂಗನಾ ವಿಫಲರಾಗಿದ್ದಾರೆ. ಹೀಗಾಗಿ ಕಚೇರಿಯ ಅಕ್ರಮ ಭಾಗವನ್ನು ಧ್ವಂಸ ಮಾಡಲಾಯಿತು ಎಂದು ಬಿಎಂಸಿ ಮೇಯರ್​ ಸಮರ್ಥನೆ ನೀಡಿದ್ದಾರೆ. (ಏಜೆನ್ಸೀಸ್​)

    ಕಂಗನಾ ಕಚೇರಿ ನೆಲಸಮ ವಿರುದ್ಧ ನೆಟ್ಟಿಗರ ಆಕ್ರೋಶ: ಟ್ವಿಟರ್​ನಲ್ಲಿ ಟ್ರೆಂಡ್​ ಆದ ಹ್ಯಾಶ್​ಟ್ಯಾಗ್​ಗಳಿವು…​

    ಶಿವಸೇನಾ ಈಗ ಸೋನಿಯಾ ಸೇನಾ ಆಗಿದೆ … ಕಂಗನಾ ಆರೋಪ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts