ಬೆಂಗಳೂರು: ಖ್ಯಾತ ಚಲನಚಿತ್ರ ನಟ ಅನಂತ್ನಾಗ್ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಪ್ರೆಸ್ಕ್ಲಬ್ನಲ್ಲಿ ಹಮ್ಕಾಮಿಕೊಂಡ ರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ, ನಟ ಅನಂತನಾಗ್ ಭಾಗಿಯಾಗಿದ್ದರು.
‘ರಾಷ್ಟ್ರ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ’ ಎನ್ನುವ ಕಾರ್ಯಕ್ರಮವನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಅನಂತ್ನಾಗ್ ಪ್ರಧಾನಿ ಮೋದಿಯನ್ನು ಹೊಗಳಿದ್ದಾರೆ.
‘ನಾನು ಮೋದಿ ಭಕ್ತ. ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೆ ಅವರು ಕೆಲಸ ಮಾಡುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಆಹ್ವಾನ ಕೊಟ್ಟಾಗ ನಾನು ‘ಇದ್ಯಾವುದೋ ಮೋದಿ ತಂದಿರುವ ಹೊಸ ಕಾರ್ಯಕ್ರಮ ಎಂದು ಯೋಚನೆಗೆ ಬಿದ್ದೆ’ ಎಂದು ಅನಂತ್ನಾಗ್ ಹೇಳಿದರು.
‘ಪತ್ರಿಕೆಗಳು ಹೀಗೆ ನಡೆಯಬೇಕು ಅಂತಾ ಸರ್ಕಾರಗಳು ತೀರ್ಮಾನ ಮಾಡಬೇಕಾ? ಹೊಸ ಪೀಳಿಗೆಯ ಮಾಧ್ಯಮಗಳು ಹೇಗಿರಬೇಕು ಅಂತಾ ಮಾಧ್ಯಮಗಳೇ ಚಿಂತಿಸಬೇಕು’ ಎಂದು ಹಿರಿಯ ನಟ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.