ಬೆಂಗಳೂರು: ನಟಸಾರ್ವಭೌಮ ಡಾ.ರಾಜಕುಮಾರ್ ಕುಟುಂಬದಲ್ಲಿ ನಿರ್ಮಾಪಕಿಯಾಗಿ ಪಾರ್ವತಮ್ಮ ರಾಜಕುಮಾರ್ ಅವರದ್ದು ದೊಡ್ಡ ಸಾಧನೆ. ಆ ಬಳಿಕ ಡಾ.ರಾಜ್ ಸೊಸೆಯಂದಿರಾದ ಅಶ್ವಿನಿ ಪುನೀತ್ ರಾಜಕುಮಾರ್, ಗೀತಾ ಶಿವರಾಜಕುಮಾರ್ ಕೂಡ ನಿರ್ಮಾಪಕಿಯರಾದರು. ಇದೀಗ ಶಿವರಾಜಕುಮಾರ್ ಅವರ ಪುತ್ರಿ ನಿವೇದಿತಾ ಕೂಡ ಸಿನಿಮಾ ನಿರ್ಮಾಪಕಿ ಆಗಿದ್ದಾರೆ.
ಇದನ್ನೂ ಓದಿ: 90ರ ಈ ವಯಸ್ಸಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದು ಕಣ್ಣುಮುಚ್ಚಬೇಕು: ಮಾಜಿ ಪ್ರಧಾನಿ ದೇವೇಗೌಡ
ನಿವೇದಿತಾ ಶಿವರಾಜಕುಮಾರ್ ‘ಶ್ರೀಮುತ್ತು ಸಿನಿ ಸರ್ವಿಸ್’ ಎಂಬ ಸಂಸ್ಥೆ ಮೂಲಕ ಈಗಾಗಲೇ ನಿರ್ಮಾಪಕಿ ಆಗಿದ್ದಾರೆ. ಈ ಸಂಸ್ಥೆಯಡಿ ಧಾರಾವಾಹಿ ಹಾಗೂ ಮೂರು ವೆಬ್ ಸೀರೀಸ್ಗಳು ನಿರ್ಮಾಣಗೊಂಡಿದ್ದರೂ ಇದುವರೆಗೆ ಸಿನಿಮಾ ನಿರ್ಮಾಣ ಆಗಿರಲಿಲ್ಲ. ಆದರೆ ಈಗ ಇದೇ ಸಂಸ್ಥೆ ಮೂಲಕ ನಿವೇದಿತಾ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಪ್ರೊಡಕ್ಷನ್ ನಂ. 1 ಎಂಬ ತಾತ್ಕಾಲಿಕ ಟೈಟಲ್ನೊಂದಿಗೆ ಚೊಚ್ಚಲ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಇದನ್ನೂ ಓದಿ: ಇದು ಡೈವೋರ್ಸ್ ಫೋಟೋಶೂಟ್: ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!
ಒಂದಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿ, ಪಿಆರ್ಕೆ ನಿರ್ಮಾಣ ಸಂಸ್ಥೆಯಡಿ ಬಂದ ‘ಮಯಾಬಜಾರ್’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕ ಆಗಿದ್ದ ವಂಶಿ ಈ ಚಿತ್ರದ ನಾಯಕ, ನಿರ್ದೇಶಕ. ಲೈಫ್ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಬಾನ ದಾರಿಯಲಿ’ ಸಿನಿಮಾದ ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ, ಚರಣ್ ರಾಜ್ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ ಇದೆ. ಜಯ್ ರಾಮ್ ಸಹ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.
ಇದನ್ನೂ ಓದಿ: ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..
ಇತ್ತೀಚೆಗೆ ತೆರೆಗೆ ಬಂದ ಐದು ಕಥೆಗಳ ‘ಪೆಂಟಗನ್’ ಸಿನಿಮಾದ ಕಿರಣ್ ಕುಮಾರ್ ನಿರ್ದೇಶನದ ಕಥೆಯಲ್ಲಿ ವಂಶಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ನಿವೇದಿತಾ ನಿರ್ಮಾಣದ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುವ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ನಾಯಕನಾಗಿ ಹೊರಹೊಮ್ಮಲು ಸಜ್ಜಾಗಿದ್ದಾರೆ.
ಅಮೆರಿಕದಲ್ಲಿ ಟೆಸ್ಲಾ ಕಾರಿಗೆ ಬಿಎಂಟಿಸಿಯ ಹಳೇ ಬಸ್ನ ನಂಬರ್; ಏನಿದರ ಹಿನ್ನೆಲೆ?