ಕನ್ನಡ ಭಾಷೆ ಸೌಹಾರ್ದತೆಯ ಪ್ರತೀಕ; ಡಾ.ಬರಗೂರು ರಾಮಚಂದ್ರಪ್ಪ ಬಣ್ಣನೆ

blank

ಬೆಂಗಳೂರು: ಸಮಾನತೆ, ಧಾರ್ಮಿಕ ಸಾಮರಸ್ಯ, ಸೌಹಾರ್ದತೆ ಹಾಗೂ ಸಹಬಾಳ್ವೆ ಈ ಎಲ್ಲವನ್ನೂ ಕನ್ನಡ ಸಾಹಿತ್ಯ ಹೇಳುತ್ತಾ ಬಂದಿದೆ. ಇದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಾವು ನಿಜವಾದ ಕನ್ನಡಿಗರಾಗಲು ಸಾಧ್ಯ ಎಂದು ಹಿರಿಯ ಸಾಹಿಡಿ ಡಾ.ಬರಗೂರು ರಾಮಚಂದ್ರಪ್ಪ ಹೇಳಿದರು.

blank

ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಕೃಷ್ಣರಾಜ ಪರಿಷನ್ಮಂದಿರದಲ್ಲಿ ನಬಿರೋಶನ್ ಪ್ರಕಾಶನ ಬೋರಗಿ ಹಾಗೂ ಶಾಫಿಯಾ ಪ್ರಕಾಶನ, ಆಲಮೇಲ ವತಿಯಿಂದ ಜರುಗಿದ ಕನ್ನಡ ರಾಜ್ಯೋತ್ಸವ ಸಂಭ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ, ಇಂಗ್ಲಿಷ್, ಹಿಂದಿ, ಸಂಸ್ಕೃತ ಸೇರಿದಂತೆ ಹಲವು ಭಾಷೆಗಳನ್ನು ಅರಗಿಸಿಕೊಂಡು ತನ್ನ ಜೀವ ಶಕ್ತಿಯನ್ನು ಪಡೆದುಕೊಂಡಿದೆ. ಇದರ ಅರ್ಥ ಆಳಲು ಬಂದವರನ್ನು ಅರಗಿಸಿಕೊಳ್ಳುವ ಶಕ್ತಿ ಕನ್ನಡಕ್ಕಿದೆ ಎಂದು ಬರಗೂರು ವಿವರಿಸಿದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಹಲವು ಸಾಧಕರಿಗೆ ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಉಡುಪಿ ಖ್ಯಾತ ಯಕ್ಷಗಾನ ಕಲಾವಿದರಿಂದ ಯಕ್ಷಗಾನ ನೃತ್ಯ ಜರುಗಿತು.

ಸಮಾರಂಭದಲ್ಲಿ ಸಾಹಿತಿ, ನಿವೃತ್ತ ಡಿಐಜಿಪಿ ಡಾ.ಡಿ.ಸಿ ರಾಜಪ್ಪ, ಯು.ಪಿ.ಎಸ್.ಸಿ ಸಾಧಕ ಶಾಂತಪ್ಪ ಕುರುಬರ, ಲೇಖಕಿ ಮಧುರಾ ಅಶೋಕ, ಇನ್ಸ್‌ಪೆಕ್ಟರ್ ಕೆ.ವಿಶ್ವನಾಥ್, ಆರಕ್ಷಕ ಮೌಲಾಲಿ ಆಲಗೂರ ಡಾ.ಸಮೀರ ಹಾದಿಮನಿ, ಪುಷ್ಪಲತಾ, ರಮೇಶ ಭಂಟನೂರ, ನಿತ್ಯಾನಂದ ಕಟ್ಟಿಮನಿ, ಡಾ.ಸುರೇಶ್ ಕೋತಿ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಭಾಷೆ ಸೌಹಾರ್ದತೆಯ ಪ್ರತೀಕ; ಡಾ.ಬರಗೂರು ರಾಮಚಂದ್ರಪ್ಪ ಬಣ್ಣನೆ

ಕನ್ನಡ ವಿಶ್ವ ಲಿಪಿಗಳ ರಾಣಿ. ಕನ್ನಡ ಸಾಹಿತ್ಯಕ್ಕೆ ದೊರೆತಷ್ಟು ಪ್ರಶಸ್ತಿ ಬೇರೆ ಯಾವ ಭಾಷೆಗೂ ದೊರೆತಿಲ್ಲ. ಕನ್ನಡ ಜಗತ್ತಿನ ಶ್ರೇಷ್ಠ ಮತ್ತು ಶ್ರೀಮಂತ ಭಾಷೆಗಳಲ್ಲಿ ಒಂದು. – ಡಾ.ವಿ. ನಾಗೇಂದ್ರ ಪ್ರಸಾದ್, ಚಿತ್ರಸಾಹಿತಿ

ಏಡ್ಸ್ ಬಗ್ಗೆ ಭಯ ಬೇಡ, ಜಾಗೃತಿ ಇರಲಿ; ದಿನೇಶ ಗುಂಡೂರಾವ್ ಕಿವಿಮಾತು

Share This Article

ಬೆಳಿಗ್ಗೆ ಎದ್ದ ತಕ್ಷಣ ಹೀಗೆ ಮಾಡಿ..ನಿಮ್ಮ ದೇಹದ ಕೊಬ್ಬು ತಕ್ಷಣ ಕಡಿಮೆಯಾಗುತ್ತದೆ! weight loss

weight loss: ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಸುತ್ತ ಇರುವ ಮೊಂಡುತನದ ಕೊಬ್ಬನ್ನು ಕಡಿಮೆ ಮಾಡುವುದು (ತೂಕ…

ಎಸಿ, ಫ್ಯಾನ್​ ಇದ್ದರೂ ಬೆವರುತ್ತಿದ್ದೀರಾ?; ತಂಪಿನ ಪ್ರದೇಶದಲ್ಲಿಯೂ ಇಷ್ಟೊಂದು ಹಿಟ್​ ಇರಲು ಕಾರಣವೇನು?: ಇಲ್ಲಿದೆ ಮಾಹಿತಿ | Sweating

Sweating: ಸಾಮಾನ್ಯವಾಗಿ ಬಹುತೇಕರು ಶಕೆಯಲ್ಲಿ ಬೆವರುವುದನ್ನು ಕಾಣುತ್ತೇವೆ. ಆದರೆ, ಇನ್ನು ಕೆಲ ಜನರು ತಾಪಮಾನ 35ಕ್ಕೂ…

ಕಾರಿನೊಳಗೆ ಮಕ್ಕಳನ್ನು ಆಡಲು ಬಿಡುತ್ತೀರಾ; ಇದು ಅವರ ಕೊನೆಯ ಆಟವಾಗಬಹುದು; ಪೋಷಕರು ಇದನ್ನು ತಿಳಿದಿರಲೇಬೇಕು| Car

Car| ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು…