ನ.25ರಂದು ನೇಪಾಳದಲ್ಲಿ ಕನ್ನಡ ರಾಜ್ಯೋತ್ಸವ

blank

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ, ನ.25ರಂದು ನೇಪಾಳದ ಕಂಠ್ಮಡುವಿನ ಪಶುಪತಿ ದೇವಾಲಯದ ಬಳಿಯ ಆನಂದ ಪಶುಪತಿಯಲ್ಲಿ ‘ಅಂತಾರಾಷ್ಟ್ರೀಯ ಮಟ್ಟದ ಕನ್ನಡ ರಾಜ್ಯೋತ್ಸವ’ ಆಯೋಜಿಸಿದೆ.

ಮೈಸೂರು ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಒಡೆಯರ್ ಚಾಲನೆ ನೀಡಲಿದ್ದಾರೆ. ಸಂಘದ ಅಧ್ಯಕ್ಷ ಎ.ಅಮೃತ್‌ರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಐಪಿಎಸ್ ಅಧಿಕಾರಿ ರೂಪ ಡಿ.ಮೌದ್ಗೀಲ್, ಗಾಯಕಿ ಅನುರಾಧ ಭಟ್, ಐಆರ್‌ಎಸ್ ಅಧಿಕಾರಿ ಜಯರಾಮ್ ರಾಯಪುರ ಮುಖ್ಯ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ. ಪಾಲಿಕೆ ಉಪ ಆರೋಗ್ಯಾಧಿಕಾರಿ ಡಾ.ಎ.ಎಲ್.ಕಲಾವತಿ ದೇವಿ ಅವರನ್ನು ಸನ್ಮಾನಿಸಲಾಗುತ್ತದೆ.ವಿವಿಧ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಲಿದೆ.

ಇದನ್ನೂ ಓದಿ:ಜಾರಕಿಹೊಳಿ ಭದ್ರಕೋಟೆ ಸಡಿಲವಾಗಿ ಹೆಬ್ಬಾಳ್ಕರ್ ಮೇಲುಗೈ; ಮಾಜಿ ಸಚಿವರ ಭವಿಷ್ಯ !

ಕನ್ನಡವನ್ನು ಪಸರಿಸುವ ನಿಟ್ಟಿನಲ್ಲಿ ಪ್ರತಿ ವರ್ಷವೂ ಒಂದೊಂದು ಸ್ಥಳಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ವರ್ಷ ನೇಪಾಳದಲ್ಲಿ ಏರ್ಪಡಿಸಲಾಗಿದೆ.ಇಂಥ ಕಾರ್ಯಕ್ರಮಗಳಿಂದ ಕನ್ನಡ ಅಸ್ಮಿತೆ ಎತ್ತಿಹಿಡಿಯುವ ಜತೆಗೆ ಭಾಷೆಯನ್ನು ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ ಎನ್ನುತ್ತಾರೆ ಸಂಘದ ಅಧ್ಯಕ್ಷ ಎ.ಅಮೃತ್‌ರಾಜ್.

Share This Article

ಮಕ್ಕಳು ಪ್ರತಿದಿನ ತಿನ್ನಲೇ ಬೇಕಾದ ಹಣ್ಣುಗಳಿವು..ಕಾರಣ ಹೀಗಿದೆ | Fruits

Fruits: ಮಕ್ಕಳ ಮೆದುಳಿನ ಬೆಳವಣಿಗೆ ಮತ್ತು ನೆನಪಿನ ಶಕ್ತಿ ಹೆಚ್ಚಿಸಲು ಹಣ್ಣುಗಳು ಬಹಳ ಪ್ರಯೋಜನಕಾರಿ. ಹಣ್ಣುಗಳಲ್ಲಿ…

ನೀವು ಕೂಡ ಇದೇ ರೀತಿಯ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಈರುಳ್ಳಿ ತಿನ್ನಲೇಬೇಡಿ.. onion

onion : ಈರುಳ್ಳಿಯಿಂದ ಹಲವು ಪ್ರಯೋಜನಗಳಿವೆ ಎಂದು ನಮಗೆಲ್ಲರಿಗೂ ತಿಳಿದಿದೆ. ಈರುಳ್ಳಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು.…

ನೀವು ಹೆಚ್ಚಾಗಿ ಹೈ ಹೀಲ್ಸ್ ಧರಿಸುತ್ತೀರಾ? ಹುಷಾರಾಗಿರಿ.. heels

heels : ಮಹಿಳೆಯರು ತಮ್ಮ ಬಟ್ಟೆಗಳಿಗೆ ಹೊಂದಿಕೆಯಾಗುವಂತೆ ಹೈ ಹೀಲ್ಸ್ ಧರಿಸಿ ಸ್ಟೈಲಿಶ್ ಆಗಿ ಕಾಣುವುದು…