ಬೆಂಗಳೂರು: 2020-21ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವ 66 ಸಾಧಕರ ಪಟ್ಟಿಯನ್ನು ಸರ್ಕಾರ ಭಾನುವಾರ ಬಿಡುಗಡೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಅವರು ಪಟ್ಟಿಯನ್ನು ಬಿಡುಗಡೆ ಮಾಡಿದರು.
66ನೇ ಕನ್ನಡ ರಾಜ್ಯೋತ್ಸವದಂದು ನಟ ದೇವರಾಜ್, ಕ್ರೀಡಾಪಟು ರೋಹನ್ ಬೋಪಣ್ಣ ಸೇರಿದಂತೆ 66 ಸಾಧಕರಿಗೆ ಈ ಬಾರಿ ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.
ಗಮನಾರ್ಹವೆಂದರೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲು ಸರ್ಕಾರ ಜನರಿಗೆ ಆಹ್ವಾನ ನೀಡಿತ್ತು. ಪರಿಣಾಮ ಈ ಬಾರಿ 28 ಸಾವಿರ ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು. ಅದರಲ್ಲಿ 66 ಸಾಧಕರನ್ನು ಸರ್ಕಾರ ಆಯ್ಕೆ ಮಾಡಿದೆ.
ಸಾಧಕರ ಪಟ್ಟಿ ಈ ಕೆಳಕಂಡಂತಿದೆ…