More

    ಪಟ್ಟಣ ಪ್ರದೇಶಗಳಲ್ಲಿ ಅಪಾಯದಂಚಿನಲ್ಲಿರುವ ಕನ್ನಡ

    ಸೋಮವಾರಪೇಟೆ: ಪಟ್ಟಣ ಪ್ರದೇಶಗಳಲ್ಲಿ ಕನ್ನಡ ಅಪಾಯದ ಅಂಚಿನಲ್ಲಿರುವಂತೆ ಭಾಸವಾಗುತ್ತಿದೆ ಎಂದು ಜಾನಪದ ಪರಿಷತ್‌ನ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ ಅಭಿಪ್ರಾಯಪಟ್ಟರು.

    ಪತ್ರಿಕಾ ಭವನದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಕನ್ನಡ ಭಾಷೆ, ಗಡಿ ರಕ್ಷಣೆಯ ಅಗತ್ಯವಿದೆ. ಕನ್ನಡ ಭಾಷೆಗೆ ಸಾಹಿತ್ಯವೇ ತಾಯಿ ಬೇರಿದ್ದಂತೆ. ಭಾಷೆ ಉಳಿಯಬೇಕಿದ್ದರೆ ಸಾಹಿತ್ಯದ ಬೆಳವಣಿಗೆಯಾಗಬೇಕು. ಈ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮುನ್ನಡಿ ಬರೆಯಲಿ ಎಂದು ಸಲಹೆ ನೀಡಿದರು.

    ಕನ್ನಡ ಸಾಹಿತ್ಯ ಪರಿಷತ್‌ನ ನಿಕಟಪೂರ್ವ ಜಿಲ್ಲಾಧ್ಯಕ್ಷ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಮಾತನಾಡಿ, ಸಂಘಟನೆಯ ಉದ್ದೇಶ ಒಳ್ಳೆಯದಿದ್ದರೆ ಮಾತ್ರ ಸಂಘಟನೆ ಬೆಳೆಯುತ್ತದೆ. ಗಡಿ ವ್ಯಾಪ್ತಿಯಲ್ಲಿ ಕನ್ನಡಿಗರ ಬದುಕು ಶೋಚನೀಯವಾಗಿದೆ. ಸರ್ಕಾರಗಳೂ ಗಡಿಗಳಲ್ಲಿ ಮೂಲಸೌಕರ್ಯ ಒದಗಿಸುವಲ್ಲಿ ವಿಫಲವಾಗಿವೆ ಎಂದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್, ಎರಡೂವರೆ ದಶಕದಿಂದ ಕರವೇ ನಿರಂತರ ಜಾಗೃತಿ ಮೂಡಿಸುವುದರೊಂದಿಗೆ ನೆಲ,ಜಲ, ಗಡಿ, ಭಾಷೆಯ ರಕ್ಷಣೆ ಮಾಡುತ್ತಾ ಬಂದಿದೆ. ಕನ್ನಡದ ಹೋರಾಟದಲ್ಲಿ ಕಾರ್ಯಕರ್ತರು ಹಲವಷ್ಟು ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಆದರೂ ಕನ್ನಡದ ಕೆಲಸವನ್ನು ನಿಲ್ಲಿಸುವುದಿಲ್ಲ ಎಂದರು.

    ಸೋಮವಾರಪೇಟೆ ತಾಲೂಕು ಘಟಕದ ಅಧ್ಯಕ್ಷರಾಗಿ ಕೆ.ಆರ್. ರೋಹಿತ್, ಕುಶಾಲನಗರ ತಾಲೂಕು ಅಧ್ಯಕ್ಷರಾಗಿ ಬಿ.ಜೆ.ಅಣ್ಣಯ್ಯ ಅವರನ್ನು ಆಯ್ಕೆ ಮಾಡಲಾಯಿತು. ಕೊಡಗು ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ಕೆ.ಆರ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಕೆ.ಪಿ. ಸುದರ್ಶನ್, ಉಪಾಧ್ಯಕ್ಷರಾಗಿ ಚಂದ್ರು, ಸಂಚಾಲಕರಾಗಿ ಬಿ.ವಿ.ರವಿ, ಉಪ ಸಂಚಾಲಕರಾಗಿ ತಾಕೇರಿ ಶೇಖರ್, ಯುವ ಘಟಕದ ಅಧ್ಯಕ್ಷರಾಗಿ ನಿತಿನ್ ಮಿಟ್ಟು, ಕಾರ್ಮಿಕ ಘಟಕದ ಸಂಚಾಲಕರಾಗಿ ಎಚ್. ಮಂಜುನಾಥ್, ಸಹ ಸಂಚಾಲಕರಾಗಿ ಮಧುಸೂದನ್, ಕೋಶಾಧಿಕಾರಿಯಾಗಿ ಜಗನ್ನಾಥ್, ತಾಲೂಕು ಕಾರ್ಮಿಕ ಘಟಕದ ಸಂಚಾಲಕರಾಗಿ ಬಿ.ಜಿ.ರವಿ, ಆಟೋ ಘಟಕದ ಸಂಚಾಲಕರಾಗಿ ಕಲ್ಕಂದೂರು ರಮೇಶ್ ಸೇರಿದಂತೆ ಗ್ರಾಮ ಸಮಿತಿಗಳಿಗೆ ಸಂಚಾಲಕರನ್ನು ಆಯ್ಕೆ ಮಾಡಲಾಯಿತು.

    ವೇದಿಕೆಯಲ್ಲಿ ನಗರ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಮಹೇಶ್, ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಸದಸ್ಯ ರುದ್ರಪ್ಪ, ಕೆಟಿಡಿಒತಾಲೂಕು ಅಧ್ಯಕ್ಷ ಬಿ.ವಿ. ರವಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts