ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಚಿತ್ರವು ಸೆ. 30ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಸೋಮವಾರ ಬೆಳಿಗ್ಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ: ‘ಲೈಗರ್’ ಹೀನಾಯ ಸೋಲು, 6 ಕೋಟಿ ರೂ. ಹಿಂದಿರುಗಿಸಲು ಮುಂದಾದ ನಟ ವಿಜಯ್ ದೇವರಕೊಂಡ
‘ಕಾಂತಾರ’ ಎಂದರೆ ನಿಗೂಢವಾದ ಕಾಡು. ಪ್ರಕೃತಿ ಹಾಗೂ ಮನುಷ್ಯನ ನಡುವಿನ ಅವಿನಾಭಾವ ಸಂಬಂಧವನ್ನು ಜಾನಪದ ಸೊಗಡಿನ ಮೂಲಕ ತೋರಿಸುವ ಪ್ರಯತ್ನ ಈ ಚಿತ್ರದಲ್ಲಾಗಿದೆ. ಭೂಮಿಯ ಸುತ್ತ ಈ ಕಥೆ ನಡೆಯುತ್ತದೆ. ದಕ್ಷಿಣ ಕನ್ನಡದ ಭೂಮಿ, ಪರಶುರಾಮ ಸೃಷ್ಟಿ ಎಂದೆ ಪ್ರಸಿದ್ದಿ. ಈ ಭಾಗದಲ್ಲಿ ನಡೆಯುವ ದೈವಾರಾಧನೆ, ಕಂಬಳ ಮುಂತಾದ ಜಾನಪದ ಕ್ರೀಡೆಗಳನ್ನು ‘ಕಾಂತಾರ’ ಚಿತ್ರದಲ್ಲಿ ನೋಡಬಹುದಾಗಿದೆ.
ಶಿವ ಹಾಗೂ ಮುರಳಿಧರ ಎಂಬ ಮುಖ್ಯಪಾತ್ರಗಳಿದ್ದು, ಶಿವನಾಗಿ ರಿಷಬ್ ಶೆಟ್ಟಿ, ಮುರಳಿಧರ ಪಾತ್ರದಲ್ಲಿ ಕಿಶೋರ್ ಕಾಣಿಸಿಕೊಂಡಿದ್ದಾರೆ. ಮಿಕ್ಕಂತೆ ಅಚ್ಯುತ್ ಕುಮಾರ್, ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ, ವಿನಯ್ ಬಿಡ್ಡಪ್ಪ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.
ಇದನ್ನೂ ಓದಿ: ರವೀಂದರ್ ಮಾಡಿದ್ದ ಮೆಸೇಜ್ ನೋಡಿ, ಸ್ವಲ್ಪ ಸಮಯ ಯೋಚಿಸಿ ಮದ್ವೆಗೆ ಒಪ್ಪಿದೆ! ಆಸಕ್ತಿಕರ ಸಂಗತಿ ಬಿಚ್ಚಿಟ್ಟ ನಟಿ ಮಹಾಲಕ್ಷ್ಮೀ
ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಎಸ್. ಕಶ್ಯಪ್ ಛಾಯಾಗ್ರಹಣವಿದೆ.