ಸುಶಾಂತ್ ಸಿಂಗ್ ಆತ್ಮಹತ್ಯೆ ಕೇಸ್ನಲ್ಲಿ ಬಾಲಿವುಡ್ನ ಪ್ರಭಾವಿ ವ್ಯಕ್ತಿಗಳ ಹೆಸರು ತಳುಕು ಹಾಕಿಕೊಂಡಿದ್ದು ಎಲ್ಲರಿಗೂ ಗೊತ್ತೇ ಇದೆ. ಈ ಪೈಕಿ ಸಲ್ಮಾನ್ ಖಾನ್, ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ ಮುಂತಾದ ಹಲವು ಖ್ಯಾತನಾಮರ ಹೆಸರು ಸೇರಿಕೊಂಡಿರುವುದು ಈ ಒಂದು ತಿಂಗಳಲ್ಲಿ ಸಾಕಷ್ಟು ಸುದ್ದಿಯಾಗಿದೆ.
ಇದನ್ನೂ ಓದಿ: ‘ಫ್ರೆಂಚ್ ಬಿರಿಯಾನಿ’ ಟ್ರೈಲರ್ ಬಂತು … ನೀವೂ ರುಚಿ ನೋಡಿ …
ಈ ಪೈಕಿ, ಈಗಾಗಲೈ ಮುಂಬೈ ಪೊಲೀಸರು, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರನ್ನ ಕರೆಸಿ ವಿಚಾರಣೆ ನಡೆಸಿದ್ದಾರೆ. ಇನ್ನು, ಈ ಕೇಸ್ನಲ್ಲಿ ಸಲ್ಮಾನ್ ಖಾನ್ ಅವರ ಹೆಸರು ಥಳುಕು ಹಾಕಿಕೊಂಡಿದ್ದರಿಂದ, ಅವರ ವಿಚಾರಣೆಯನ್ನೂ ಮಾಡಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಈ ಸುದ್ದಿ ಸುಳ್ಳಾಗಿದೆ. ಸಲ್ಮಾನ್ ಖಾನ್ ಅವರನ್ನು ವಿಚಾರಣೆಗೆ ಒಳಪಡಿಸುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈಗ ಕರಣ್ ಜೋಹರ್ ಅವರನ್ನು ವಿಚಾರಣೆಗೆ ಒಳಪಡಿಸುವ ಉದ್ದೇಶವಿಲ್ಲ ಎಂದು ಮುಂಬೈ ಪೊಲೀಸ್ ಸ್ಪಷ್ಟಪಡಿಸಿದೆ. ಅದಕ್ಕೆ ಕಾರಣವೂ ಇದೆ. ಸುಶಾಂತ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಇದುವರೆಗೂ 35ಕ್ಕೂ ಹೆಚ್ಚು ಜನರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ, ಯಾರೊಬ್ಬರೂ ಸಹ ಕರಣ್ ಹೆಸರು ಪ್ರಸ್ತಾಪ ಮಾಡಿಲ್ಲವಂತೆ. ಹಾಗಾಗಿ ಸುಶಾಂತ್ ಸಾವಿಗೂ, ಕರಣ್ ಜೋಹರ್ಗೂ ಸಂಬಂಧವಿಲ್ಲ ಎಂಬ ತೀರ್ಮಾನಕ್ಕೆ ಮುಂಬೈ ಪೊಲೀಸ್ ಬಂದ ಹಾಗಿದೆ. ಅದೇ ಕಾರಣಕ್ಕೆ, ಕರಣ್ ಅವರನ್ನು ಈ ವಿಷಯದಲ್ಲಿ ವಿಚಾರಣೆ ಮಾಡಲಾಗುತ್ತಿಲ್ಲ ಎಂದು ಹೇಳಾಗಿದೆ.
ಸುಶಾಂತ್ ಆತ್ಮಹತ್ಯೆಯಲ್ಲಿ ಕರಣ್ ಅವರ ನೇರ ಪಾತ್ರ ಇಲ್ಲಿದಿದ್ದರೂ, ಪರೋಕ್ಷವಾಗಿ ಕಾರಣವಾಗಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಳೆದ ಒಂದು ತಿಂಗಳನಿಂದ ಸಾಕಷ್ಟು ಚರ್ಚೆಯಾಗಿದೆ. ಇನ್ನು ಸುಶಾಂತ್ ಅವರ ಬಿಹಾರದ ಅಭಿಮಾನಿಗಳು, ಕರಣ್ ಅವರ ಪ್ರತಿಕೃತಿಯನ್ನು ದಹಿಸಿ, ಅವರ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ.
ಇದನ್ನೂ ಓದಿ: ಸಾಲು ಸಾಲು ವೆಬ್ಸಿರೀಸ್ ಮತ್ತು ಸಿನಿಮಾಗಳನ್ನು ಘೋಷಣೆ ಮಾಡಿದ ನೆಟ್ಫ್ಲಿಕ್ಸ್ ಇಂಡಿಯಾ
ಇನ್ನು ಮುಂಬೈ ಪೊಲೀಸರು, ಸುಶಾಂತ್ ಅವರ ಗೆಳತಿಯಾದ ರಿಯಾ ಚಕ್ರವರ್ತಿ ಅವರ ಹಣಕಾಸಿನ ಸ್ಥಿತಿಗತಿಯ ಬಗ್ಗೆಯೂ ಗಮನಹರಿಸುತ್ತಿದ್ದಾರೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ರಿಯಾ ಚಕ್ರವರ್ತಿ ಇತ್ತೀಚಿನ ದಿನಗಳಲ್ಲಿ ಎಷ್ಟು ಖರ್ಚು ಮಾಡಿದ್ದರು, ಅವರ ಹಣಕಾಸಿನ ಮೂಲ ಯಾವುದು, ಅವರೇನಾದರೂ ಸುಶಾಂತ್ರಿಂದ ಹಣ ಪಡೆದಿದ್ದರಾ… ಮುಂತಾದ ವಿಷಯಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.
PHOTOS: ನಟಿ ರಮ್ಯಾರ ಸೊಟ್ಟ ಮುಖ ನೋಡಿ ಕಂಗಾಲಾದ ನೆಟ್ಟಿಗರು; ಯಾಕೀ ಹುಚ್ಚಾಟ ಎಂದು ಕೇಳುತ್ತಿದ್ದಾರೆ ಅಭಿಮಾನಿಗಳು !