ಬಡವರಿಗೆ ನಿವೇಶನ ನೀಡಲು ಭೂಮಿ ಗುರುತಿಸಿ

Protest

ಕಾರಟಗಿ: ಪಟ್ಟಣ ವ್ಯಾಪ್ತಿಯ ವಸತಿ ರಹಿತರಿಗೆ ನಿವೇಶನ ನೀಡಲು ಸರ್ಕಾರಿ ಭೂಮಿ ಗುರುತಿಸುವಂತೆ ಒತ್ತಾಯಿಸಿ ನಿವೇಶನ ಹಾಗೂ ವಸತಿ ರಹಿತ ಹೋರಾಟ ಸಮಿತಿ ತಾಲೂಕು ಘಟಕದ ಪದಾಧಿಕಾರಿಗಳು ಗುರುವಾರ ಪುರಸಭೆ ಮುಂದೆ ಪ್ರತಿಭಟನೆ ನಡೆಸಿದರು.

ಪಟ್ಟಣ ವ್ಯಾಪ್ತಿಯ ಬಹುತೇಕ ಬಡವರು ಈವರೆಗೆ ನಿವೇಶನ ಹೊಂದಿಲ್ಲ. ಈವರೆಲ್ಲರೂ ಸೇರಿ ಈಗ ವಸತಿ ಮತ್ತು ನಿವೇಶನ ರಹಿತರ ಘಟಕ ನಿರ್ಮಾಣ ಮಾಡಿಕೊಂಡಿದ್ದೇವೆ. ಇನ್ನೂ ಸಾವಿರಾರು ಸಂಖ್ಯೆಯ ಬಡವರು ಈವರೆಗೆ ನಿವೇಶನ, ವಸತಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿಲ್ಲ. ಈಗಾಗಲೇ ಅರ್ಜಿ ಸಲ್ಲಿಸಿರುವವರನ್ನು ರಾಜೀವ್‌ಗಾಂಧಿ ವಸತಿ ನಿಗಮದ ನಿವೇಶನ ಮತ್ತು ವಸತಿ ರಹಿತ ಸಮೀಕ್ಷೆ ಪಟ್ಟಿಗೆ ಸೇರಿಸಿಲ್ಲ. ಕಳೆದ 20 ವರ್ಷಗಳಿಂದ ಬಾಡಿಗೆ ಮನೆಯಲ್ಲಿಯೇ ವಾಸ ಮಾಡುತ್ತಿದ್ದು, ಸಂಕಷ್ಟ ಅನುಭವಿಸುತ್ತಿದ್ದಾರೆ. ಕಾಲುವೆ ದಂಡೆಯ ಮೇಲೆ ಗುಡಿಸಲು ಹಾಕಿಕೊಂಡು ಅತಂತ್ರ ಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಾರೆ.

ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಸರ್ಕಾರಿ ಭೂಮಿ ಗುರುತಿಸಬೇಕು. ಭೂಮಿ ಲಭ್ಯವಿಲ್ಲದ ವೇಳೆ ಖಾಸಗಿ ಜಮೀನು ಖರೀದಿಸಿ ಜನರಿಗೆ ಹಂಚಿಕೆ ಮಾಡಬೇಕು. ಈ ಸಂಬಂಧ ಜಾಗೃತ ಸಭೆ ಶೀಘ್ರ ಆಯೋಜಿಸಿ ನಮ್ಮ ತಾಲೂಕು ಘಟಕದ ಪದಾಧಿಕಾರಿಗಳನ್ನು ಆಹ್ವಾನಿಸಬೇಕು ಎಂದು ಆಗ್ರಹಿಸಿದರು.

ರಾಜ್ಯಾಧ್ಯಕ್ಷರಾದ ಚಂದ್ರಶೇಖರ ಡೋಂಗ್ರಿ, ಕೆ.ಎಸ್. ಜನಾರ್ದನ, ಕಾರ್ಯದರ್ಶಿ ಮೋನಪ್ಪ ಮೋಡಿಗೇರ್, ಜಿಲ್ಲಾಧ್ಯಕ್ಷ ಹುಲಗಪ್ಪ, ಕಾರ್ಯದರ್ಶಿ ತಿಮ್ಮಣ್ಣ, ತಾಲೂಕಾಧ್ಯಕ್ಷ ಬದ್ರಿ ನಾಗರಾಜ, ಕಾರ್ಯದರ್ಶಿ ನಾಗರಾಜ, ಉಪಾಧ್ಯಕ್ಷ ಲಕ್ಷ್ಮಣ ನಾಯಕ, ಸದಸ್ಯೆ ಸುನಿತಾ, ಕಾಮಕ್ಷಿ ಸೇರಿ ಇತರರಿದ್ದರು.

Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…