More

    ಕಾವೇರಿಗಾಗಿ ಕರವೇ ರಕ್ತ ಪತ್ರ

    ತೀರ್ಥಹಳ್ಳಿ: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕರ್ನಾಟಕ ತಮಿಳುನಾಡಿನ ನಡುವೆ ಉಂಟಾಗಿರುವ ಸಮಸ್ಯೆಯನ್ನು ಇತ್ಯರ್ಥಗೊಳಿಸುವಂತೆ ಆಗ್ರಹಿಸಿ ಕರವೇ(ನಾರಾಯಣ ಗೌಡ ಬಣ) ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದು ಮನವಿ ಮಾಡಿದ್ದಾರೆ.

    ತಾಲೂಕು ಸಂಘಟನೆಯ ಪದಾಧಿಕಾರಿಗಳು ಸೇರಿ 18 ಮಂದಿ ತಮ್ಮ ರಕ್ತದಲ್ಲಿ ಬರೆದ ಮನವಿ ಪತ್ರವನ್ನು ಸೋಮವಾರ ಸಂಜೆ ಪ್ರಧಾನ ಮಂತ್ರಿಯವರ ಹೆಸರಿಗೆ ರವಾನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಪಟೇಲ್ ವೆಂಕಟೇಶ ಹೆಗ್ಡೆ, ನಾರಾಯಣ ಗೌಡರ ಸೂಚನೆಯಂತೆ ರಾಜ್ಯದಿಂದ ಲಕ್ಷಾಂತರ ಮಂದಿ ಸಂಘಟನೆಯ ಕಟ್ಟಾಳುಗಳು ರಾಜ್ಯಕ್ಕೆ ಎದುರಾಗಿರುವ ಸಂಕಟವನ್ನು ನಿವಾರಿಸುವಂತೆ ಆಗ್ರಹಿಸಿ ತಮ್ಮ ನೆತ್ತರಿನ ಮೂಲಕ ಪ್ರಧಾನಿಗೆ ಮನವಿ ಮಾಡಲಾಗಿದೆ ಎಂದರು.
    ತಾಲೂಕು ಅಧ್ಯಕ್ಷ ಯಡೂರು ಸುರೇಂದ್ರ, ಗೌರವಾಧ್ಯಕ್ಷ ಮಲ್ಲಕ್ಕಿ ರಾಘವೇಂದ್ರ, ಜ್ಯೋತಿ ದಿಲೀಪ್, ಸುರೇಶ್, ಅರ್ಜುನ್, ಪ್ರತಿಮಾ, ರೇಖಾ, ಶಿವಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts