ಧಾರವಾಡ: ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಂದ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜು. 26ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ಕಾರ್ಗಿಲ್ ಸ್ತೂಪದಲ್ಲಿ ಆಯೋಜಿಸಲಾಗಿದೆ. ಸೈನಿಕರು, ಮಾಜಿ ಸೈನಿಕರು ಮತ್ತು ಅವಲಂಬಿತರು, ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಕಟಣೆ ತಿಳಿಸಿದೆ.
* ಸೈನಿಕ ಸೇವಾ ಸಂಸ್ಥೆಯಿಂದ ನಮನ:
ಸೈನಿಕ ಸೇವಾ ಸಂಸ್ಥೆಯಿಂದ ಕಾರ್ಗಿಲ್ ಸ್ಥೂಪದ ಬಳಿ ಅಂದು ಬೆಳಗ್ಗೆ 9 ಗಂಟೆಗೆ ಕಾರ್ಗಿಲ್ ವಿಜಯೋತ್ಸವ ಆಯೋಜಿಸಲಾಗಿದೆ. ಧಾರವಾಡ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಶ್ರೀಶಾನಂದ ಅತಿಥಿಯಾಗಿ ಪಾಲ್ಗೊಳ್ಳುವರು. ನಾಗರಿಕರು ಕಾರ್ಗಿಲ್ ವಿಜಯೋತ್ಸವದಲ್ಲಿ ಭಾಗವಹಿಸಬೇಕು ಎಂದು ಕರ್ನಾಟಕ ಸೈನಿಕರ ಸೇವಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಅಮಿನಗಡ ಕೋರಿದ್ದಾರೆ.