ತಿರುವನಂತಪುರ: ಕೇರಳದ ಕೋಯಿಕ್ಕೋಡಿನ ಕರಿಪ್ಪೂರ್ ವಿಮಾನ ನಿಲ್ದಾಣದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. 100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಫ್ಲೈಟ್ ರಾಡಾರ್ 24ರ ಪ್ರಕಾರ ವಿಮಾನ ಎರಡು ಬಾರಿ ಕರಿಪ್ಪೂರ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಪ್ರಯತ್ನಿಸಿತ್ತು.
ಘಟನಾ ಸ್ಥಳದಲ್ಲೇ 17 ಜನ ಸಾವನ್ನಪ್ಪಿದರೆ ಇನ್ನಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, 110 ಜನ ಕೋಯಿಕ್ಕೋಡ್ ಆಸ್ಪತ್ರೆಯಲ್ಲೂ 80 ಜನ ಮಲಪ್ಪುರಂ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಒಬ್ಬರು ಗರ್ಭಿಣಿ, ನಾಲ್ವರು ಮಕ್ಕಳು ಸೇರಿ 15 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ನಾಗರಿಕ ವಿಮಾನ ಯಾನ ಸಚಿವರು, ಕೇರಳದ ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಇತರೆ ಸಚಿವರು ಆಗಮಿಸುತ್ತಿದ್ದು, ಪರಿಹಾರ ಕ್ರಮಗಳು ಸಮರೋಪಾದಿಯಲ್ಲಿ ನಡೆಯುತ್ತಿವೆ.
ಇದನ್ನೂ ಓದಿ: ಭಾರತದಲ್ಲಿ ಈ ಹಿಂದೆ ನಡೆದ ವಿಮಾನ ದುರಂತಗಳು
ಈ ನಡುವೆ ಪತನಗೊಂಡ ವಿಮಾನದ ಬ್ಲ್ಯಾಕ್ಬಾಕ್ಸ್ ಪತ್ತೆಯಾಗಿದೆ. ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್ ಕೂಡ ಪತ್ತೆಯಾಗಿದೆ. ಕಾಕ್ಪಿಟ್ ವಾಯ್ಸ್ ರೆಕಾರ್ಡರ್ ಸಂಗ್ರಹಿಸುವುದಕ್ಕೆ ಪ್ರಯತ್ನಿಸಲಾಗುತ್ತಿದ್ದು, ವಿಮಾನದ ಫ್ಲೋರ್ಬೋರ್ಡ್ ತುಂಡಾಗಿರುವ ಕಾರಣ ಕಷ್ಟವಾಗಿದೆ ಎಂದು ನಾಗರಿಕ ವಿಮಾನ ಯಾನ ಸಚಿವಾಲಯ ತಿಳಿಸಿದೆ. (ಏಜೆನ್ಸೀಸ್)
ಜೋಡಿ ದುರಂತ ಕೇರಳಕ್ಕೆ ಆಘಾತ: 2 ಹೋಳಾದ ವಿಮಾನ, ಭೂಕುಸಿತಕ್ಕೆ 13 ಮಂದಿ ಜೀವಂತ ಸಮಾಧಿ