ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಜರುಗಿಸಿದ ಸಚಿವ ಸಂತೋಷ ಲಾಡ್

blank

ಕನಿಷ್ಟ ವೇತನ ಪಾವತಿಸದ ಏಜೆನ್ಸಿ ಪರವಾನಿಗೆ ರದ್ದತಿಗೆ ಸೂಚನೆ

ಗದಗ: ಕಾರ್ಮಿಕರ ಕಲ್ಯಾಣಕ್ಕಾಗಿಯೇ ಕಾರ್ಮಿಕ ಇಲಾಖೆ ಕರ‍್ಯನಿರ್ವಹಿಸಬೇಕು. ಕಾರ್ಮಿಕರಿಗೆ ಕನಿಷ್ಟ ವೇತನ ಹಾಗೂ ವಿವಿಧ ಸೌಲಭ್ಯಗಳನ್ನು ಗುತ್ತಿಗೆ ಪಡೆದ ಏಜೆನ್ಸಿÁರರು ಪಾವತಿಸಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ, ನಿಯಮಾನುಸಾರ ವೇತನ ಪಾವತಿಸದ ಏಜೆನ್ಸಿಗಳ ಪರವಾನಿಗೆಯನ್ನು ರದ್ದು ಪಡಿಸಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚಿಸಿದರು.

ಗದಗ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಬುಧವಾರ ಅವರು ಮಾತನಾಡಿದರು. ಶ್ರಮ ವಹಿಸಿ ದುಡಿಯುವ ವರ್ಗಕ್ಕೆ ಸರ್ಕಾರದಿಂದ ಸರಿಯಾಗಿ ವೇತನ ಪಾವತಿಯಾಗುವಂತೆ ಕ್ರಮ ಕೈಗೊಳ್ಳಬೇಕು. ವೇತನ ಹಾಗೂ ಪಿ.ಎಫ್. ಪಾವತಿಸದ ಏಜೆನ್ಸಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳುವ ಮೂಲಕ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಇಲಾಖಾ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ನಿರ್ದೇಶನ ನೀಡಿದರು.
ಕಾರ್ಮಿಕ ಕಾಯ್ದೆಗಳ ಉಲ್ಲಂಘನೆ ಪ್ರಕರಣಗಳ ಕುರಿತು ತಪಾಸಣೆ ಮಾಡಿದ ದಾಖಲೆಗಳ ಬಗ್ಗೆ ಮಾತನಾಡಿದ ಅವರು ಕಾರ್ಮಿಕ ಇಲಾಖೆ ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಾ ಮುಂದಿನ ದಿನಗಳಲ್ಲಿ ಶ್ರಧ್ಧೆಯಿಂದ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.
ಪ್ರತಿ ಕೆಡಿಪಿ ಸಭೆಯಲ್ಲಿಯೂ ಬಾಲಕಾರ್ಮಿಕರ ಬಗ್ಗೆ ಪರಿಶೀಲನೆಯಾಗಬೇಕು. ಜೊತೆಗೆ ಬಾಲಕಾರ್ಮಿಕ ಪ್ರಕರಣಗಳ ಉಲ್ಲಂಘನೆ ಕುರಿತಂತೆ ಸಭೆಗಳು ಜರುಗಬೇಕು. ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಜರುಗಿಸಿ ಪ್ರತಿ ತಿಂಗಳು ವರದಿ ಸಲ್ಲಿಸುವಂತೆ ಪೊಲೀಸ ಇಲಾಖೆಗೆ ಸೂಚನೆ ನೀಡಿದರು.
ಜಿಲ್ಲಾ ಮಟ್ಟದಲ್ಲಿ ಜಿಲ್ಲಾಡಳಿತದ ಮುಖ್ಯಸ್ಥರು ಜಾಗೃತಿ ಕಾರ್ಯಕ್ರಮಗಳನ್ನು ಮಾಡುವುದರಿಂದ ಪರಿಣಾಮಕಾರಿ ಜಾಗೃತಿ ಮೂಡಲಿದೆ ಎಂದ ಅವರು ಇಲಾಖೆಯ ಅಧಿಕಾರಿಗಳು ನಿಯಮಿತವಾಗಿ ಹೋಟೆಲ್ , ಬಾಯ್ಲರ್, ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಬಾಲ ಕಾರ್ಮಿಕರ ಬಳಕೆ ಮಾಡುವ ಬಗ್ಗೆ ಪರಿಶೀಲಿಸಬೇಕು ಅಲ್ಲದೇ ಕಾರ್ಮಿಕರಿಗೆ ಇರುವ ಸೌಲಭ್ಯಗಳ ಕುರಿತು ಅರಿವು ಮೂಡಿಸಿ ಸೌಲಭ್ಯಗಳು ತಲುಪಿರುವ ಬಗ್ಗೆ ಮನವರಿಕೆ ಮಾಡಿಕೊಳ್ಳಬೇಕೆಂದು ಹೇಳಿದರು.
ರಾಜ್ಯದಲ್ಲಿ 58 ಲಕ್ಷ ಕಾರ್ಮಿಕ ಕಾರ್ಡ ಹೊಂದಿದ್ದರೂ ಅವೆಲ್ಲವುಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಿ ಅಕ್ರಮ ಕಾರ್ಡಗಳನ್ನು ಅನರ್ಹಗೊಳಿಸುವ ಮೂಲಕ ರಾಜ್ಯದಲ್ಲಿ ಒಟ್ಟು 32 ಲಕ್ಷ ಕಾರ್ಡಗೆ ಮಿತಿಗೊಳಿಸಲಾಗಿದೆ. ಹೊಸ ಕಾರ್ಡ ನೊಂದಣಿ ಕುರಿತಂತೆ ಕಾರ್ಮಿಕ ಇಲಾಖೆಯಲ್ಲಿ ಅರ್ಜಿ ಪರಿಶೀಲನೆಯನ್ನು ಅಧಿಕಾರಿಗಳು ಸರಿಯಾಗಿ ಮಾಢಬೇಕು. ಇಲ್ಲದಿದ್ದಲ್ಲಿ ನಿಮ್ಮನ್ನೇ ಹೊಣೆಗಾರರನ್ನಾಗಿ ಶಿಕ್ಷಿಸಬೇಕಾಗುತ್ತದೆ ಎಂದು ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಮಾತನಾಡಿ ಗದಗ ಜಿಲ್ಲೆಯಲ್ಲಿ ಬಾಲ ಕಾರ್ಮಿಕರ ಬಳಕೆ ನಿಯಂತ್ರಣವಾಗಿರಬಹುದು. ನಿರ್ನಾಮವಾಗಿಲ್ಲ. ಅಧಿಕಾರಿ ವರ್ಗ ಬಾಲಕಾರ್ಮಿಕ ಬಳಕೆ ಆಗದಂತೆ ಸಂಪೂರ್ಣ ಶಿಸ್ತು ಕ್ರಮ ಕೈಗೊಳ್ಳಲಿ ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ ಮಾತನಾಡಿ ಏಪ್ರಿಲ್ 1 ರಿಂದ ಈವರೆಗೆ ಜಿಲ್ಲೆಯಲ್ಲಿ 1730 ತಪಾಸಣೆಗಳನ್ನು ನಡೆಸಲಾಗಿದ್ದು 361 ಕಾರ್ಮಿಕರ ಉಲ್ಲಂಘನಾ ಪ್ರಕರಣಗಳು ಕಂಡು ಬಂದಿವೆ. 296 ಉಲ್ಲಂಘನಾ ಪ್ರಕರಣಗಳನ್ನು ಸರಿಪಡಿಸಲಾಗಿದೆ. 62 ಉಲ್ಲಂಘನಾ ಪ್ರಕರಣಗಳಿಗೆ ಸಂಬAಧಿಸಿದAತೆ ನೋಟೀಸ್ ಪ್ರಕಟಿಸಲಾಗಿದೆ. 5 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರಿಗೆ ಸಂಬAಧಿಸಿದAತೆ 417 ತಪಾಸಣೆ ಕೈಗೊಳ್ಳಲಾಗಿದೆ. 3 ಪ್ರಕರಣಗಳಲ್ಲಿ 32 ಸಾವಿರ ರೂ. ದಂಡ ವಿಧಿಸಲಾಗಿದೆ. ಕೈಗಾರಿಕಾ ವಿವಾದ ಕಾಯ್ದೆಯಡಿ ಸರ್ಕಾರಿ ಮಂಡಳಿ ಹಾಗೂ ಖಾಸಗಿಯಿಂದ 37 ದೂರುಗಳು ಸ್ವೀಕೃತವಾಗಿದ್ದು 5 ದೂರುಗಳನ್ನು ಹೊರತುಪಡಿಸಿ ಉಳಿದೆಲ್ಲ ದೂರುಗಳನ್ನು ಇತ್ಯರ್ಥಪಡಿಸಲಾಗಿದೆ. ಉಪದಾನ ಪಾವತಿ ಕಾಯ್ದೆಯಡಿ ಬಾಕಿ ಇದ್ದ 155 ವಿವಾದ ಸೇರಿದಂತೆ ಒಟ್ಟು 192 ಸ್ವೀಕೃತಿಯಾದ ಪ್ರಕರಣಗಳಿವೆ. ಈ ಪೈಕಿ 156 ಬಾಕಿ ಇದ್ದು ಉಳಿದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 1,31,535 ಕಾರ್ಮಿಕ ಕಾರ್ಡುಗಳ ನೋಂದಣಿಯಾಗಿದ್ದು, ಈ ಪೈಕಿ 56,671 ಕಾರ್ಮಿಕ ಕಾರ್ಡುಗಳು ಚಾಲ್ತಿಯಲ್ಲಿವೆ. ತಾಯಿ ಮಗು ಸಹಾಯಹಸ್ತ ಯೋಜನೆಯಡಿ ಜಿಲ್ಲೆಯಲ್ಲಿ 167 ಅರ್ಜಿ ಸ್ವೀಕೃತವಾಗಿದ್ದು 141 ವಿಲೇವಾರಿ ಮಾಡಲಾಗಿದೆ. 73 ಅರ್ಜಿಗಳನ್ನು ಅನುಮೋದಿಸಿದೆ ಎಂದು ಸಭೆಗೆ ವಿವರವಾದ ಮಾಹಿತಿ ಒದಗಿಸಿದರು.
ಗದಗ ಜಿಲ್ಲೆಯಲ್ಲಿ 2023-2024 ರಿಂದ ಈವರೆಗೆ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಯಡಿ ಒದಗಿಸಲಾದ ಅನುದಾನ ಹಾಗೂ ಸೌಲಭ್ಯದ ವಿವರ ಈ ಕೆಳಗಿನಂತಿದೆ.
ಮದುವೆ ಧನ ಸಹಾಯ ಯೋಜನೆಯಡಿ 2273 ಫಲಾನುಭವಿಗಳಿಗೆ 14.3 ಕೋಟಿ ರೂ, ಹೆರಿಗೆ ಧನಸಹಾಯ ಯೋಜನೆಯಡಿ 343 ಫಲಾನುಭವಿಗಳಿಗೆ 1.71 ಕೋಟಿ ರೂ, ತಾಯಿ ಮಗು ಸಹಾಯ ಹಸ್ತ ಯೋಜನೆಯಡಿ 127 ಫಲಾನುಭವಿಗಳಿಗೆ 7.62 ಲಕ್ಷ ರೂ, ವೈದ್ಯಕೀಯ ಮರುಪಾವತಿ ಯೋಜನೆಯಡಿ 26 ಫಲಾನುಭವಿಗಳಿಗೆ 2.75 ಲಕ್ಷ ರೂ, ದುರ್ಬಲತೆಯ ಪಿಂಚಣಿ ಯೋಜನೆಯಡಿ 3 ಫಲಾನುಭವಿಗಳಿಗೆ 6 ಸಾವಿರ ರೂ, ಪ್ರಮುಖ ವೈದ್ಯಕೀಯ ಧನ ಸಹಾಯ ಯೋಜನೆಯಡಿ 189 ಫಲಾನುಭವಿಗಳಿಗೆ 1.20 ಕೋಟಿ ರೂ, ಪಿಂಚಣಿ ಧನಸಹಾಯ ಯೋಜನೆಯಡಿ 95 ಫಲಾನುಭವಿಗಳಿಗೆ 2.85 ಲಕ್ಷ , ( ಅಪಘಾತ ) ಎಕ್ಸಿಡೆಂಟ್ ಅಸಿಸ್ಟನ್ಸ್ ಯೋಜನೆಯಡಿ 10 ಫಲಾನುಭವಿಗಳಿಗೆ 50 ಲಕ್ಷ ರೂ,ಅಂತ್ಯಕ್ರಿಯೆ ವೆಚ್ಚ ಮತ್ತು ಡೆತ್ ಅಸಿಸ್ಟನ್ಸ್ ಯೋಜನೆಯಡಿ 314 ಫಲಾನುಭವಿಗಳಿಗೆ 2.55 ಕೋಟಿ ರೂ, ಟೂಲ್ ಕಿಟ್ ಯೋಜನೆಯಡಿ 2032 ಫಲಾನುಭವಿಗಳಿಗೆ 97.81 ಲಕ್ಷ, ಪ್ರಿವೆಂಟಿವ್ ಹೆಲ್ತ ಕೇರ್ ಯೋಜನೆಯಡಿ 33500 ಫಲಾನುಭವಿಗಳಿಗೆ 9.85 ಕೋಟಿ ರೂ, , ಆರ್ ಪಿ ಎಲ್ ತರಬೇತಿ ಯೋಜನೆಯಡಿ 1826 ಫಲಾನುಭವಿಗಳಿಗೆ 64.49 ಲಕ್ಷ ರೂ ,ಆರ್‌ಪಿಎಲ್‌ಕಿಟ್ ಯೋಜನೆಯಡಿ 1826 ಫಲಾನುಭವಿಗಳಿಗೆ 46.16 ಲಕ್ಷ ರೂ, ಮೊಬೈಲ್ ಮೆಡಿಕಲ್ ಯುನಿಟ್ ಯೋಜನೆಯಡಿ 26241 ಫಲಾನುಭವಿಗಳಿಗೆ1.20 ಕೋಟಿ ರೂ. ಹೀಗೆ ಒಟ್ಟು ವಿವಿಧ ಯೋಜನೆಗಳಡಿ 68832 ಫಲಾನುಭವಿಗಳಿಗೆ 33.00 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಅಧಿಕಾರಿಗಳು ಸಭೆಗೆ ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಜಿ.ಎಸ್.ಪಾಟೀಲ, ಡಾ.ಚಂದ್ರು ಲಮಾಣಿ, ಎಸ್.ವಿ.ಸಂಕನೂರ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ ಸೇರಿದಂತೆ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ ಡಿ, ಕಾರ್ಮಿಕ ಆಯುಕ್ತರಾದ ಡಾ. ಎಚ್.ಎನ್. ಗೋಪಾಲಕೃಷ್ಣ, ಹೆಚ್ಚುವರಿ ಕಾರ್ಮಿಕ ಆಯುಕ್ತರಾದ ಡಾ. ಎಸ್.ಬಿ.ರವಿಕುಮಾರ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:
Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…