ಬೆಂಗಳೂರು: ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ನ ನಿಜವಾದ ಮುಖ ಬಯಲಾಗಿದೆ ಎಂದು ಶಿಕಾರಿಪುರದ ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದಾರೆ.
ಮೌನವಾಗಿದ್ದಾರೆ
ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಟೀಕಾ ಪ್ರಹಾರ ನಡೆಸಿದ್ದಾರೆ. ಅಧಿಕಾರದ ಲಾಭಕ್ಕಾಗಿ ಲಿಂಗಾಯತ ಹೆಸರನ್ನು ಪಾದಪೀಠವಾಗಿಸಿಕೊಂಡ ಕಾಂಗ್ರೆಸ್ನ ಧೀಮಂತ ನಾಯಕರು ಲಿಂಗಾಯತರಿಗೆ ಸಿಎಂ ಅಥವಾ ಡಿಸಿಎಂ ನೀಡಿ ಎಂಬ ಮಾತು ಕೇಳಿಬಂದಾಗ ಮೌನವಾಗಿದ್ದಾರೆ.
ಇದನ್ನೂ ಓದಿ: ಕಡಿಮೆ ಬೆಲೆಗೆ ಸಿಕ್ತು ಅಂತ ಮೊಬೈಲ್ ಖರೀದಿಸಿದ್ರೆ ಸಂಕಟ ಗ್ಯಾರಂಟಿ! ಮಂಡ್ಯ ಪೊಲೀಸರಿಂದ ಎಚ್ಚರಿಕೆ
After using Lingayats as Pedestal for its greed of power,Stalwarts of Congress hv suddenly gone silent whn it comes to offering CM or even DCM
Ironically,evn aftr winning a max of 39 MLAs frm Congrs,Lingayats finds itself without any strong Voice to Demand Rightful Positions.1/3
— Vijayendra Yeddyurappa (@BYVijayendra) May 19, 2023
ಇದೇ ಮೊದಲೇನಲ್ಲ
39 ಲಿಂಗಾಯತ ಶಾಸಕರು ಆಯ್ಕೆಯಾಗಿದ್ದರು ಯಾವೊಬ್ಬ ಲಿಂಗಾಯತ ನಾಯಕನೂ ಕೂಡ ಸರಿಯಾದ ಸ್ಥಾನಕ್ಕಾಗಿ ತಮ್ಮ ಧ್ವನಿ ಎತ್ತದಿರುವುದು ವಿಪರ್ಯಾವಾಗಿದೆ. ಕಾಂಗ್ರೆಸ್ನ ಅಸಲಿ ಮುಖ ಬಯಲಾಗಿದೆ. ಲಿಂಗಾಯತ ಸಮುದಾಯವನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಹಿಂದಿನಿಂದಲೂ ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ ನ್ಯಾಯ ಒದಿಗಿಸಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಹರಿಹಾಯ್ದಿದ್ದಾರೆ.
ಅಣ್ಣ ಬಸವಣ್ಣ ಮತ್ತು ಅವರ ಬೋಧನೆಗಳನ್ನು ನಿಜವಾಗಿಯೂ ಪ್ರತಿನಿಧಿಸುವುದು ಬಿಜೆಪಿ ಮಾತ್ರ. ಬಸವಣ್ಣನವರ ತತ್ವವನ್ನು ಅನುಸರಿಸುವ ಮೂಲಕ ಎಲ್ಲರಿಗೂ ನ್ಯಾಯವನ್ನು ಒದಗಿಸುತ್ತಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಪಿಯು ಮರು ಮೌಲ್ಯಮಾಪನ: ತಬಸುಮ್ ಹಿಂದಿಕ್ಕಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಶು ನಾಯ್ಕ್!
ವಿಶ್ವದ ಅತ್ಯಂತ ದುಬಾರಿ ಐಸ್ ಕ್ರೀಮ್ ಯಾವುದು ಗೊತ್ತಾ? ಲಕ್ಷಾಂತರ ರೂ. ಬೆಲೆ ಬಾಳುತ್ತೆ ಈ ಐಸ್ ಕ್ರೀಮ್