More

    ಕಾಂಗ್ರೆಸ್​ನ ನಿಜ ಮುಖ ಬಯಲಾಗಿದೆ: ಬಿ.ವೈ. ವಿಜಯೇಂದ್ರ ವಾಗ್ದಾಳಿ

    ಬೆಂಗಳೂರು: ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್​ನ ನಿಜವಾದ ಮುಖ ಬಯಲಾಗಿದೆ ಎಂದು ಶಿಕಾರಿಪುರದ ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದಾರೆ.

    ಮೌನವಾಗಿದ್ದಾರೆ

    ಟ್ವೀಟ್​ ಮೂಲಕ ಕಾಂಗ್ರೆಸ್​ ವಿರುದ್ಧ ವಿಜಯೇಂದ್ರ ಟೀಕಾ ಪ್ರಹಾರ ನಡೆಸಿದ್ದಾರೆ. ಅಧಿಕಾರದ ಲಾಭಕ್ಕಾಗಿ ಲಿಂಗಾಯತ ಹೆಸರನ್ನು ಪಾದಪೀಠವಾಗಿಸಿಕೊಂಡ ಕಾಂಗ್ರೆಸ್​ನ ಧೀಮಂತ ನಾಯಕರು ಲಿಂಗಾಯತರಿಗೆ ಸಿಎಂ ಅಥವಾ ಡಿಸಿಎಂ ನೀಡಿ ಎಂಬ ಮಾತು ಕೇಳಿಬಂದಾಗ ಮೌನವಾಗಿದ್ದಾರೆ.

    ಇದನ್ನೂ ಓದಿ: ಕಡಿಮೆ ಬೆಲೆಗೆ ಸಿಕ್ತು ಅಂತ ಮೊಬೈಲ್​ ಖರೀದಿಸಿದ್ರೆ ಸಂಕಟ ಗ್ಯಾರಂಟಿ! ಮಂಡ್ಯ ಪೊಲೀಸರಿಂದ ಎಚ್ಚರಿಕೆ

    ಇದೇ ಮೊದಲೇನಲ್ಲ

    39 ಲಿಂಗಾಯತ ಶಾಸಕರು ಆಯ್ಕೆಯಾಗಿದ್ದರು ಯಾವೊಬ್ಬ ಲಿಂಗಾಯತ ನಾಯಕನೂ ಕೂಡ ಸರಿಯಾದ ಸ್ಥಾನಕ್ಕಾಗಿ ತಮ್ಮ ಧ್ವನಿ ಎತ್ತದಿರುವುದು ವಿಪರ್ಯಾವಾಗಿದೆ. ಕಾಂಗ್ರೆಸ್​ನ ಅಸಲಿ ಮುಖ ಬಯಲಾಗಿದೆ. ಲಿಂಗಾಯತ ಸಮುದಾಯವನ್ನು ಕಾಂಗ್ರೆಸ್​ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಹಿಂದಿನಿಂದಲೂ ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್​ ನ್ಯಾಯ ಒದಿಗಿಸಿಲ್ಲ ಎಂದು ಕಾಂಗ್ರೆಸ್​ ವಿರುದ್ಧ ವಿಜಯೇಂದ್ರ ಹರಿಹಾಯ್ದಿದ್ದಾರೆ.

    ಅಣ್ಣ ಬಸವಣ್ಣ ಮತ್ತು ಅವರ ಬೋಧನೆಗಳನ್ನು ನಿಜವಾಗಿಯೂ ಪ್ರತಿನಿಧಿಸುವುದು ಬಿಜೆಪಿ ಮಾತ್ರ. ಬಸವಣ್ಣನವರ ತತ್ವವನ್ನು ಅನುಸರಿಸುವ ಮೂಲಕ ಎಲ್ಲರಿಗೂ ನ್ಯಾಯವನ್ನು ಒದಗಿಸುತ್ತಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

    ಭೀಕರ ಅಪಘಾತ; ಬಿಜೆಪಿಯ ಮಾಜಿ ಸಚಿವ ವಿಧಿವಶ

    ಪಿಯು ಮರು ಮೌಲ್ಯಮಾಪನ: ತಬಸುಮ್​ ಹಿಂದಿಕ್ಕಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಶು ನಾಯ್ಕ್!

    ವಿಶ್ವದ ಅತ್ಯಂತ ದುಬಾರಿ ಐಸ್ ಕ್ರೀಮ್ ಯಾವುದು ಗೊತ್ತಾ? ಲಕ್ಷಾಂತರ ರೂ. ಬೆಲೆ ಬಾಳುತ್ತೆ ಈ ಐಸ್​ ಕ್ರೀಮ್​​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts