More

    4 ದಿನಗಳಲ್ಲಿ ಉಪಚುನಾವಣೆ ದಿನಾಂಕ ಘೋಷಣೆ; ನಾಲ್ಕೂ ಕ್ಷೇತ್ರದಲ್ಲೂ ಗೆಲುವು ನಮ್ಮದೇ ಎಂದ ಯಡಿಯೂರಪ್ಪ

    ಶಿವಮೊಗ್ಗ: ಪಂಚ ರಾಜ್ಯಗಳ ಚುನಾವಣೆಯ ರಂಗಿನ ಮಧ್ಯದಲ್ಲಿಯೇ ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದ್ದು, ಇನ್ನು ನಾಲ್ಕು ದಿನಗಳಲ್ಲಿ ಉಪ ಚುನಾವಣಾ ದಿನಾಂಕ ಘೋಷಣೆಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ನಾಲ್ಕು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು ಆ ನಾಲ್ಕರಲ್ಲೂ ಬಿಜೆಪಿಯೇ ಗೆಲ್ಲಲಿದೆ ಎಂದು ಅವರು ಹೇಳಿಕೊಂಡಿದ್ದಾರೆ.

    ಬೆಳಗಾವಿಯ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. ಅದರ ಜತೆ ಮಸ್ಕಿ, ಬಸವ ಕಲ್ಯಾಣ, ಸಿಂಧಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಕ್ಷೇತ್ರಗಳಿಗೆ ಪಕ್ಷದ ಚುನಾವಣಾ ಉಸ್ತುವಾರಿಗಳನ್ನು ಈಗಾಗಲೇ ಪ್ರಕಟಿಸಲಾಗಿದೆ. ಉಪ ಚುನಾವಣಾ ದಿನಾಂಕ ಘೋಷಣೆ ಆದ ನಂತರ ಅಭ್ಯರ್ಥಿಗಳ ಹೆಸರನ್ನೂ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಮಾರ್ಚ್​ 8ರಂದು ಬಜೆಟ್​ ನಡೆಯಲಿದೆ. ಬಜೆಟ್​ ಮಂಡನೆಯಾದ ನಂತರ ಚುನಾವಣಾ ಪ್ರಚಾರವನ್ನು ಅವರು ಆರಂಭಿಸಲಿದ್ದಾರೆ.

    ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿರುವ ಯಡಿಯೂರಪ್ಪನವರು ಸೋಮವಾರದಂದು ಡಿವಿಜನ್​ ವೀರಶೈವ ಹಾಸ್ಟೆಲ್​ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕಾರ್ಯಕ್ರಮದ ನಂತರ ಕೋಟೆ ಸೀತಾರಾಮಾಂಜನೇಯ ದೇವಸ್ಥಾನ, ಕೋಟೆ ಮಾರಿಕಾಂಬಾ ದೇವಸ್ಥಾನ, ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. (ಏಜೆನ್ಸೀಸ್​)
    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

    ಸೆಲ್ಫಿಗೆ ಫೋಸ್​ ಕೊಡಲು ಹೋಗಿ ಅಪ್ಪ ಮಗನ ಸಾವು!

    ಗಂಡ ಮನೆಯಲ್ಲಿ ಇಲ್ಲವೆಂದು ಪ್ರಿಯತಮನನ್ನು ಕರೆಸಿಕೊಂಡ ಹೆಂಡತಿ! ಅಮೇಲಾಗಿದ್ದು ಏನು ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts